ರಾಜ್ಯದಲ್ಲಿಂದು 22 ಹೊಸ ಕೊರೊನಾ ಕೇಸ್ : ಸೋಂಕಿತ ಸಂಖ್ಯೆ 981ಕ್ಕೇರಿಕೆ!
ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರಿದಿದ್ದು ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಮದ್ಯಾಹ್ನದ ವರದಿ ಪ್ರಕಾರ ಹೊಸದಾಗಿ 22 ಪ್ರಕರಣಗಳು ದಾಖಲಾಗಿದ್ದು, ಈವರೆಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 981 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಹೌದು… ನಿನ್ನೆ 34 ಕೊರೊನಾ ಕೇಸ್ ದಾಖಲಾಗಿತ್ತು. ನಿನ್ನೆ ಸಂಜೆಯಿಂದ ಇಂದು ಮದ್ಯಾಹ್ನದ ಬುಲಿಟಿನ್ ವರದಿಯಲ್ಲಿ ಹೊಸದಾಗಿ 22 ಪ್ರಕರಣಗಳು ದಾಖಲಾಗಿದ್ದು, ಇವರಲ್ಲಿ 981 ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು. 35 ಜನ ಕಿಲ್ಲರ್ ಕೊರೊನಾ ಗೆ ಬಲಿಯಾಗಿದ್ದಾರೆ. 22 ಹೊಸ ಕೇಸ್ ಗಳ ಪೈಕಿ ಬೀದರ್ 4, ಬೆಂಗಳೂರು 5, ಮಂಡ್ಯ4, ಗದಗ4, ದಾವಗಣಗೆರೆ 3, ಬಾಗಲಕೋಟೆ 1, ಬೆಳಗಾವಿ 1 ಪ್ರಕರಣಗಳು ದಾಖಲಾಗಿವೆ.
ದಕ್ಷಿಣ ಕನ್ನಡ ಜಿಲ್ಲೆ ಬೆನ್ನಲ್ಲೀಗ ಬೆಂಗಳೂರಿನಲ್ಲಿ ಮತ್ತೋರ್ವ ಮಾರಕ ಕೊರೋನಾ ಸೋಂಕಿಗೆ ಬಲಿಯಾದ ಪರಿಣಾಮ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರು ಸಂಖ್ಯೆ 5ಕ್ಕೆ ಏರಿದೆ. ರಾಜ್ಯದಲ್ಲಿ ಮೃತರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಇನ್ನು, ಆಂಧ್ರಪ್ರದೇಶ ಮೂಲದ 60 ವರ್ಷ ವ್ಯಕ್ತಿಯೋರ್ವ ಶುಗರ್ ಮತ್ತು ಲಿವರ್ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದರು. ಇವರಿಗೆ ಕೊರೋನಾ ಬಂದಿತ್ತು. ಹೀಗಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೀಗ ಚಿಕಿತ್ಸೆ ಫಲಿಸದ ಕಾರಣ ಸಾವನ್ನಪ್ಪಿದ್ಧಾರೆ.
ದೇಶಾದ್ಯಂತ ಲಾಕ್ಡೌನ್ ಮುಗಿಯಲು ಕೇವಲ 4 ದಿನಗಳು ಬಾಕಿ ಇವೆ. ಆದರೆ, ರಾಜ್ಯದಲ್ಲಿ ಇನ್ನೂ ಕೊರೋನಾ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬಂದಿಲ್ಲ. ರಾಜ್ಯದಲ್ಲಿ ಕೊರೋನಾ ಆತಂಕ ಮತ್ತಷ್ಟು ಹೆಚ್ಚಾಗಿದೆ.