ರಾಜ್ಯದಲ್ಲಿ ಏರಿಕೆಯಾದ ಕೊರೊನಾ ಸೋಂಕು; ಬೆಂಗಳೂರಿನ ಪ್ರಮುಖ ಪ್ರದೇಶಗಳು ಸೀಲ್‌ಡೌನ್‌!

ಕರ್ನಾಟಕದಲ್ಲಿ ಕೊರೊನಾ ಆರ್ಭಟ ಗರಿಗೆದರಿದ್ದು, ಇಂದು ರಾಜ್ಯದಲ್ಲಿ ಹೊಸದಾಗಿ 249 ಕೊರೋನಾ ಪ್ರಕರಣಗಳು ವರದಿಯಾಗಿವೆ. ಐವರು ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.

ಇಂದಿನ ಹೊಸ ಕೊರೊನಾ ಪ್ರಕರಣಗಳು ಸೇರಿದಂತೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9399 ಕ್ಕೆ ಏರಿಕೆಯಾಗಿದ್ದು, 146 ಮಂದಿ ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರಲ್ಲಿ 5730 ಮಂದಿ ಗುಣಮುಖರಾಗಿದ್ದು,  3523 ಪ್ರಕರಣಗಳು ಸಕ್ರಯವಾಗಿವೆ. ಈ ಪೈಕಿ 80 ರೋಗಿಗಳಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

249 ಸೋಂಕಿತರ ಪೈಕಿ 50 ಮಂದಿ ಅಂತಾರಾಜ್ಯ ಮತ್ತು 11 ಮಂದಿ ಅಂತಾರಾಷ್ಟ್ರೀಯ ಪ್ರಯಾಣದ ಇತಿಹಾಸ ಹೊಂದಿದ್ದಾರೆ.

ಬೆಂಗಳೂರು ನಗರದಲ್ಲಿ 126, ಕಲಬುರಗಿಯಲ್ಲಿ 27, ವಿಜಯಪುರದಲ್ಲಿ 15, ಉಡುಪಿಯಲ್ಲಿ 14, ದಕ್ಷಿಣ ಕನ್ನಡದಲ್ಲಿ 12, ದಾವಣಗೆರೆಯಲ್ಲಿ 9, ಉತ್ತರಕನ್ನಡ, ಬಾಗಲಕೋಟೆಯಲ್ಲಿ ತಲಾ 6, ಬೀದರ್, ಚಿಕ್ಕಮಗಳೂರಿನಲ್ಲಿ ತಲಾ 5, ಧಾರವಾಡ, ಬೆಂಗಳೂರು ಗ್ರಾಮಾಂತರದಲ್ಲಿ ತಲಾ 4, ರಾಮನಗರದಲ್ಲಿ ತಲಾ 3, ಚಿತ್ರದುರ್ಗ, ಕೋಲಾರ, ತುಮಕೂರು, ಕೊಡಗಿನಲ್ಲಿ ತಲಾ 2, ಯಾದಗಿರಿ, ಮೈಸೂರು, ಚಿಕ್ಕಬಳ್ಳಾಪುರ, ಗದಗ ಮತ್ತು ಕೊಪ್ಪಳದಲ್ಲಿ ತಲಾ 1 ಪ್ರಕರಣ ವರದಿಯಾಗಿವೆ.

ಬೆಂಗಳೂರಿನಲ್ಲಿ ಕೊರೊನಾ ಸೋಂಕಿನ ಹಾವಳಿ ಹೆಚ್ಚಾಗಿದ್ದು, ಕಲಾಸಿಪಾಳ್ಯ, ಕೆ.ಆರ್‌.ಮಾರ್ಕೆಟ್‌ ಹಾಗೂ ಚಿಕ್ಕಪೇಟೆ ಏರಿಯಾಗಳನ್ನು ಜೂನ್‌ 30ರ ವರೆಗೆ ಸೀಲ್‌ಡೌನ್ ಮಾಡಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights