ರಾಜ್ಯಸಭೆ ಸ್ಥಾನಕ್ಕೆ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಸೂಚಿಸಿದ ಹೈಕಮಾಂಡ್..

ರಾಜ್ಯಸಭೆ ಸ್ಥಾನಕ್ಕಾಗಿ ಇದೇ ಜೂನ್ 19ಕ್ಕೆ ಚುನಾವಣೆ ಘೋಷಣೆಯಾಗಿದ್ದು ಹೈಕಮಾಂಡ್ ಪಕ್ಷದ ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಮಾಡಿದೆ.

ಜೆಡಿಎಸ್‌ನ ಕುಪೇಂದ್ರ ರೆಡ್ಡಿ, ಕಾಂಗ್ರೆಸ್​‌ನ ಬಿ.ಕೆ. ಹರಿಪ್ರಸಾದ್, ಪ್ರೊ.ರಾಜೀವ್‌ಗೌಡ, ಬಿಜೆಪಿಯ ಪ್ರಭಾಕರ್ ಅವರ ರಾಜ್ಯಸಭೆ ಅವಧಿ ಜೂನ್ 25ಕ್ಕೆ ಕೊನೆಗೊಳ್ಳಲಿದೆ. ಹಾಗಾಗಿ ಕೇಂದ್ರ ಚುನಾವಣಾ ಆಯೋಗ ಜೂನ್ 19ಕ್ಕೆ ನಾಲ್ಕು ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದ್ದು ಸ್ಥಾನಕ್ಕಾಗಿ ಕಾಂಗ್ರೆಸ್​ನಲ್ಲಿ ಪೈಪೋಟಿ ಶುರುವಾಗಿತ್ತು. ಆದರೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಮಲ್ಲಿಕಾರ್ಜುನ ಖರ್ಗೆ ಹೆಸರು ಸೂಚಿಸಿದ್ದಾರೆಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್​ನಿಂದ ತುಮಕೂರಿನ ಮುದ್ದಹನುಮೇಗೌಡ ಅವರು ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ ಹೈಕಮಾಂಡ್ ಖರ್ಗೆ ಹೆಸರು ಒಪ್ಪಿದ್ದರಿಂದ, ಸಿದ್ದರಾಮಯ್ಯ ಕೂಡ ಖರ್ಗೆ ಹೆಸರನ್ನೇ ಸೂಚಿಸಿದ್ದರಿಂದ ಹುಸಿ ಮುನಿಸಿಗೆ ಕಾರಣವಾಗಿದೆ. ಇನ್ನೂ ಜೆಡಿಎಸ್ ನಲ್ಲಿ ಹೆಚ್.ಡಿ ದೇವೇಗೌಡರ ಹೆಸರು ಕೇಳಿ ಬಂದಿದ್ದು, ಬಿಜೆಪಿ ಯಲ್ಲಿ ಸಾಕಷ್ಟು ಲಾಬಿ ನಡೆದಿದೆ. ಯಾರ ಹೆಸರನ್ನ ಹೈಕಮಾಂಡ್ ಸೂಚಿಸುತ್ತೆ ಅನ್ನೋದನ್ನ ಕಾದು ನೋಡಬೇಕಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights