ರಾಷ್ಟ್ರಭಕ್ತಿಯನ್ನು ಪುನರ್ ವ್ಯಾಖ್ಯಾನ ಮಾಡುವ ಕಾಲವಿದು: ವಜೂಭಾಯಿವಾಲಾ

ದೇಶದಲ್ಲಿ ರಾಷ್ಟ್ರಭಕ್ತಿಯನ್ನು ಪುನರ್ ವ್ಯಾಖ್ಯಾನ ಮಾಡುವ ಕಾಲ ಎದುರಾಗಿದೆ. ದೇಶದಲ್ಲಿ ಹರಿದಾಡುತ್ತಿರುವ ರಾಷ್ಟ್ರ ಭಕ್ತಿಯ ನವೋತ್ಸಾಹವನ್ನು ಗುರುತಿಸಲು ಸ್ವಾತಂತ್ರ್ಯ ದಿನೋತ್ಸವ ಉತ್ತಮ ಅವಕಾಶವಾಗಿದೆ ಎಂದು ರಾಜ್ಯಪಾಲ ವಜೂಭಾಯಿ ವಾಲಾ ಹೇಳಿದ್ದಾರೆ.

ಸಂವಿಧಾನ ನೀಡಿರುವ ಮೂಲ ಭೂತ ಕರ್ವವ್ಯಗಳನ್ನು ಅತ್ಯಂತ ಪ್ರಮಾಣಿಕ ಮತ್ತು ಬದ್ಧತೆಯಿಂದ ನಿರ್ವಹಿಸಿದಾಗ ಮಾತ್ರ ಮೂಲ ಭೂತ ಹಕ್ಕುಗಳ ಫಲ ಅನುಭವಿಸಲು ಸಾಧ್ಯ ಎಂದು ಅವರು ಹೇಳಿದ್ದಾರೆ.

ಕೋವಿಡ್ 19 ಸಂದರ್ಭದಲ್ಲಿ ನಮ್ಮ ಶಕ್ತಿಯನ್ನು ಪುನರುಜ್ಜೀವನಗೊಳಿಸಿ ನಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕಿದೆ. ಎಲ್ಲರೂ ಒಗ್ಗೂಡಿ ನವ ಮತ್ತು ಭಲಿಷ್ಠ ಭಾರತ ನಿರ್ಮಾಣ ಮಾಡಲು ಮುಂದಾಗಬೇಕು ಎಂದಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights