ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನ ತರಾಟೆ ತೆಗೆದುಕೊಂಡ ಶಾಸಕ ಶಿವಲಿಂಗೇಗೌಡ
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನ ಅರಸೀಕೆರೆ ಜೆಡಿಎಸ್ ಶಾಸಕ ಕೆಎಂ, ಶಿವಲಿಂಗೇಗೌಡ ತರಾಟೆ ತೆಗೆದುಕೊಂಡರು.
ಹಾಸನದ ಅರಸೀಕೆರೆ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 206 ಕಳಪೆ ಕಾಮಗಾರಿ ಎಂದು ಆಕ್ರೋಶ ವ್ಯಕ್ತವಾಗಿತ್ತು. ಇಂದು ಇದನ್ನ ಪರಿಶೀಲಿಸಿದ ಶಾಸಕರು ಅಧಿಕಾರಿಗಳ ವಿರುದ್ಧ ಗುಡುಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ವ್ಯವಸ್ಥಾಪಕ ಅಶೋಕ್, ಗುತ್ತಿಗೆ ಎಸ್,ಬಿ ರಾಯ್ ಮತ್ತು ಎಂಜಿನಿಯರ್ ರನ್ನ ತರಾಟೆ ತೆಗೆದುಕೊಂಡ ಶಿವಲಿಂಗೇಗೌಡ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ ಎಂದು ತರಾಟೆ ತೆಗೆದುಕೊಂಡರು.
ಹೆದ್ದಾರಿ ಕಾಮಗಾರಿ ಸರಿಯಾಗಿ ಮಾಡದಿದ್ದಲ್ಲಿ ಕೆಲಸ ಮಾಡಲು ಬಿಡುವುದಿಲ್ಲಾ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ಕಲ್ಮಶದ ಮೇಲೆ ರಸ್ತೆ ನಿರ್ಮಿಸಿದ್ದೀರಿ ಸರಿಯಾಗಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.