ರಾಷ್ಟ್ರೀಯ ಹೆದ್ದಾರಿ 75 ಕ್ಕೆ ಸಾವಿನ ರಹದಾರಿ ಎಂದು ಬೋರ್ಡ್ ಹಾಕಿದ ಸ್ಥಳೀಯರು…!
ರಸ್ತೆ ಸಮಸ್ಯೆ ಎಲ್ಲಿ ಇಲ್ಲ ಹೇಳಿ? ಸಿಲಿಕಾನ್ ಸಿಟಿ ಯಿಂದ ಹಿಡಿದು ಹಳ್ಳಿಗಳ ವರೆಗೆ ರಸ್ತೆ ಸಮಸ್ಯೆ ಇದ್ದೇ ಇದೆ. ಹಾಸನ ಕೂಡ ಈ ಸಮಸ್ಯೆಯಿಂದ ಹೊರತಾಗಿಲ್ಲ. ಹೀಗಾಗಿ ಅಲ್ಲ ಜನ ವಿಶೇಷವಾಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾಸನದಿಂದ ಸಕಲೇಶಪುರವರೆಗೆ 40 ಕಿ ಮೀ ರಸ್ತೆ ಸಂಪೂರ್ಣ ಹಾಳಾಗಿರುವ ಹಿನ್ನೆಲೆಯಲ್ಲಿ ಹಾಸನದ ರಾಷ್ಟ್ರೀಯ ಹೆದ್ದಾರಿ 75 ಕ್ಕೆ ಸಾವಿನ ರಹದಾರಿ ಎಂದು ಬೋರ್ಡ್ ಹಾಕಲಾಗಿದೆ.
ಹೌದು.. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬಾಳುಪೇಟೆ ಬಳಿ ಜಯ ಕರ್ನಾಟಕ ಸಂಘಟನೆ ವತಿಯಿಂದ ಬೋರ್ಡ್ ಅಳವಡಿಕೆ ಮಾಡಲಾಗಿದೆ. ಕಳೆದ ಎರಡು ತಿಂಗಳಿಂದ ಸುರಿದ ಮಳೆಗೆ ಗುಂಡಿ ಬಿದ್ದಿರುವ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಬೋರ್ಡ್ ಹಾಕಿ ಆಕ್ರೋಶ ವ್ಯಕ್ತಪಡಿಸಿದೆ.
ಹಲವು ಬಾರಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರು ಆದರೂ ರಸ್ತೆ ದರಸ್ಥೆ ಕಾರ್ಯ ಮಾತ್ರ ಮಾಡಲಾಗಿಲ್ಲ. ಹೀಗಾಗಿ ರಸ್ತೆ ದುರಸ್ತಿ ಮಾಡುವಂತೆ ಮನವಿ ಮಾಡಿದ್ರೂ ಕ್ಯಾರೇ ಎನ್ನದ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.