ವಿಜಯಪುರದಲ್ಲಿ ಬಿಜೆಪಿ ಭಿನ್ನಮತ ಸ್ಪೋಟ : ಯಾರಿಗೆ ಅಧ್ಯಕ್ಷ ಸ್ಥಾನ..?

ವಿಜಯಪುರದಲ್ಲಿ ಬಿಜೆಪಿ ಭಿನ್ನಮತ ಮತ್ತೆ ಸ್ಪೋಟಗೊಂಡಿದೆ.

ವಿಜಯಪುರ ನಗರ ಬಿಜೆಪಿ ಅಧ್ಯಕ್ಷ ನೇಮಕ ವಿಚಾರದ ಹಿನ್ನೆಲೆ, ನಗರ ಶಾಸಕ ಬಸನಗೌಡ ಆರ್. ಪಾಟೀಲ ಯತ್ನಾಳ ಹಾಗೂ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಬೆಂಬಲಿಗರ ಮಧ್ಯೆ ವಾಗ್ವಾದ ನಡೆದಿದೆ. ವಿಜಯಪುರ ನಗರ ಬಿಜೆಪಿ ಅಧ್ಯಕ್ಷರಾಗಿ ಮಳುಗೌಡ ಪಾಟೀಲ ನೇಮಕಕ್ಕೆ ಯತ್ನಾಳ ಬೆಂಬಲಿಗರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ನಗರ ಘಟಕದ ಅಧ್ಯಕ್ಷ ನೇಮಕಕ್ಕೆ ಸಂಬಂಧಿಸಿದಂತೆ ಯಾವುದೇ ಸಭೆ ನಡೆಸಿಲ್ಲ. ಏಕಾಏಕಿ ನೇಮಕ ಘೋಷಣೆ ಮಾಡಲಾಗಿದೆ ಎಂದು ಆರೋಪ ಮಾಡಲಾಗುತ್ತಿದೆ. ಈ ವೇಳೆ ಯತ್ನಾಳ ಮತ್ತು ಪಟ್ಟಣಶೆಟ್ಟಿ ಬೆಂಬಲಿಗರ ಮಧ್ಯೆ ಮಾತಿನ ಚಕಮಕಿ ನಡೆದಿದೆ.

ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಇತರ ಮುಖಂಡರ ಎದುರಿನಲ್ಲಿಯೇ ವಾಗ್ವಾದ ಮಾಡಲಾಗಿದೆ. ಈ ಮೂಲಕ ಜಿಲ್ಲಾ ಬಿಜೆಪಿ ಘಟಕದಲ್ಲಿನ ಆಂತರಿಕ ಭಿನ್ನಮತ ಮತ್ತೆ ಬಹಿರಂಗಗೊಂಡಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights