ವಿದೇಶದಿಂದ ಭಾರತಕ್ಕೆ ವಾಪಸ್ಸಾಗುತ್ತಿರುವ ಶಾಸಕ ತನ್ವೀರ್ ಸೇಠ್…
ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣ ಬಳಿಕ ವಿಶ್ರಾಂತಿಗಾಗಿ ವಿದೇಶಕ್ಕೆ ತೆರಳಿದ್ದ ಶಾಸಕ ತನ್ವೀರ್ ಸೇಠ್ ಸದ್ಯ ಭಾರತಕ್ಕೆ ವಾಪಸ್ಸಾಗಿದ್ದಾರೆ.
ವಿದೇಶದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಶಾಸಕ ತನ್ವೀರ್ ಸೇಠ್ ವಿಶ್ರಾಂತಿ ಮುಗಿಸಿ ಭಾರತಕ್ಕೆ ವಾಪಸ್ಸಾಗಿದ್ದಾರೆ. ದುಬೈನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಶಾಸಕರ ಮೇಲೆ ನವೆಂಬರ್ 18ರಂದು ಕೊಲೆ ಯತ್ನ ನಡೆದಿತ್ತು. ಈ ವೇಳೆ ಕುತ್ತಿಗೆ ಭಾಗಕ್ಕೆ ಮಚ್ಚಿನ ಪೆಟ್ಟು ಬಿದ್ದಿತ್ತು. ಇದರಿಂದ ಮೈಸೂರಿನಲ್ಲಿ ಚಿಕಿತ್ಸೆ ಪಡೆದಿದ್ದ ಶಾಸಕರು ನಂತರ ವೈದ್ಯರ ಸಲಹೆ ಮೇರೆಗೆ ವಿದೇಶದಲ್ಲು ಚಿಕಿತ್ಸೆ ಪಡೆದಿದ್ದರು.
ಚಿಕಿತ್ಸೆ ನಂತರ ದುಬೈನಲ್ಲೆ ವಿಶ್ರಾಂತಿ ಪಡೆಯುತ್ತಿದ್ದರು. ಇಂದು ಸಂಜೆ ವೇಳೆಗೆ ಮೈಸೂರಿಗೆ ಆಗಮಿಸಲಿದ್ದಾರೆಂದು ಮೂಲಗಳು ತಿಳಿಸಿದ್ದಾರೆ.