ವಿದ್ಯುತ್ ತಂತಿ ತಗುಲಿ ಕಬ್ಬಿನ ಗದ್ದೆಗೆ ಬೆಂಕಿ : 3 ಎಕರೆ ಕಬ್ಬು ಸುಟ್ಟು‌ ಭಸ್ಮ

ವಿದ್ಯುತ್ ತಂತಿ ತಗುಲಿ ಕಬ್ಬಿನ ಗದ್ದೆಗೆ ಬೆಂಕಿ ಹೊತ್ತುಕೊಂಡು 3 ಎಕರೆ ಕಬ್ಬು ಸುಟ್ಟು‌ ಭಸ್ಮವಾದ ಘಟನೆ  ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಉಮರಜ ಗ್ರಾಮದಲ್ಲಿ ನಡೆದಿದೆ.

ರಾಜಕುಮಾರ ತುಕಾರಾಮ ಲೋಣಿ ಎಂಬುವವರಿಗೆ ಸೇರಿದ 3 ಎಕರೆ ಕಬ್ಬು ಸುಟ್ಟು ಕರಕಲಾಗಿದೆ. ಅಪಾರ ಪ್ರಮಾಣದ ಕಬ್ಬು ನಷ್ಟವಾಗಿದ್ದು,  ರೈತ ರಾಜಕುಮಾರ ತುಕಾರಾಮ ಲೋಣಿ ಕಂಗಾಲಾಗಿದ್ದಾನೆ.

ವಿಜಯಪುರ ಜಿಲ್ಲೆಯ ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights