ವಿದ್ಯುತ್ ತಂತಿ ತಗುಲಿ ಕಬ್ಬಿನ ಗದ್ದೆಗೆ ಬೆಂಕಿ : 3 ಎಕರೆ ಕಬ್ಬು ಸುಟ್ಟು ಭಸ್ಮ
ವಿದ್ಯುತ್ ತಂತಿ ತಗುಲಿ ಕಬ್ಬಿನ ಗದ್ದೆಗೆ ಬೆಂಕಿ ಹೊತ್ತುಕೊಂಡು 3 ಎಕರೆ ಕಬ್ಬು ಸುಟ್ಟು ಭಸ್ಮವಾದ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಉಮರಜ ಗ್ರಾಮದಲ್ಲಿ ನಡೆದಿದೆ.
ರಾಜಕುಮಾರ ತುಕಾರಾಮ ಲೋಣಿ ಎಂಬುವವರಿಗೆ ಸೇರಿದ 3 ಎಕರೆ ಕಬ್ಬು ಸುಟ್ಟು ಕರಕಲಾಗಿದೆ. ಅಪಾರ ಪ್ರಮಾಣದ ಕಬ್ಬು ನಷ್ಟವಾಗಿದ್ದು, ರೈತ ರಾಜಕುಮಾರ ತುಕಾರಾಮ ಲೋಣಿ ಕಂಗಾಲಾಗಿದ್ದಾನೆ.
ವಿಜಯಪುರ ಜಿಲ್ಲೆಯ ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ವಿಚಾರಣೆ ನಡೆಸಿದ್ದಾರೆ.