ಶಾಲಾ ಕೊಠಡಿ ನಿರ್ಮಾಣಕ್ಕೆ ತೆಗೆಯಲಾಗಿದ್ದ ಗುಂಡಿಗೆ ಬಿದ್ದು ಶಾಲಾ ಬಾಲಕ ಸಾವು….!

ಶಾಲಾ ಕೊಠಡಿ ನಿರ್ಮಾಣಕ್ಕೆಂದು ತೆಗೆದಿದ್ದ ತಗ್ಗು ಗುಂಡಿಯಲ್ಲಿ ಅದೇ ಶಾಲೆ ವಿದ್ಯಾರ್ಥಿಯೊಬ್ಬ ಬಿದ್ದು ಸಾವನ್ನಪ್ಪಿರೋ ಧಾರುಣ ಘಟನೆ ಬಾಗಲಕೋಟೆ ಜಿಲ್ಲೆಯ ಸೂಳೇಭಾವಿ ಗ್ರಾಮದಲ್ಲಿ ನಡೆದಿದೆ.

೮ವರ್ಷದ ಗಣೇಶ ನಡಕಟ್ಟಿ,ಮೃತ ಶಾಲಾಬಾಲಕನಾಗಿದ್ದು, ಸ್ಥಳೀಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದ, ಈತ ಶಾಲೆಯ ರಜೆ ಅವಧಿಯಲ್ಲಿ ಇಂದು ಬೆಳಗ‌್ಗೆ ಆಟವಾಡಲು ತೆರಳಿದಾಗ ಈ ದುರ್ಘಟನೆ ನಡೆದಿದೆ.
ಶಾಲೆಯ ಕೋಣೆ ನಿರ್ಮಾಣಕ್ಕೆಂದು ದೊಡ್ಡ ದೊಡ್ಡ ಗುಂಡಿ ತೆಗೆಯಲಾಗಿದ್ದು, ಒಂದು ತಿಂಗಳಿನಿಂದ ಹಾಗೇ ಬಿಡಲಾಗಿತ್ತು. ಇತ್ತೀಚೆಗೆ ಸುರಿದ ಮಳೆಯಿಂದಾಗಿ ಗುಂಡಿ ಸಂಪೂರ್ಣವಾಗಿ ನೀರಿನಿಂದ ತುಂಬಿ ಹೋಗಿತ್ತು.

ಈಗಾಗಲೇ ಆಗಾಗ ಹಲವು ವಿದ್ಯಾರ್ಥಿಗಳು ಗುಂಡಿಯಲ್ಲಿ ಬಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದ್ರೆ ಸದ್ಯ ಗಣೇಶ ಸಾವನ್ನಪ್ಪಿದ್ದಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಸಂಬಂಧಿಸಿದವರು ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.ಇನ್ನು ಮೃತ ಶಾಲಾ ಬಾಲಕನ ಕುಟುಂಬಸ್ಥರು ಆಕ್ರಂದನ ಮುಗಿಲು ಮುಟ್ಟಿತ್ತು.ಸರ್ಕಾರ ಮೃತ ಶಾಲಾ ಬಾಲಕನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಸ್ಥಳೀಯರ ಒತ್ತಾಯಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights