ಶಿಕ್ಷಕರ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು : ಶಾಲೆಗೆ ಬೀಗ ಹಾಕಿ ಪ್ರತಿಭಟನೆ…

ನಾನಾ ನೆಪವೊಡ್ಡಿ ಶಿಕ್ಷಕರಿಂದ ನಿರಂತರ ಗೈರು ಆರೋಪಿಸಿ ರೊಚ್ಚಿಗೆದ್ದ ಗ್ರಾಮಸ್ಥರಿಂದ ಶಾಲೆಗೆ ಕೀಲಿ ಹಾಕಿ ಪ್ರತಿಭಟನೆ ಮಾಡಿದರು.

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹಳೆ ತಾರಾಪುರ ಗ್ರಾಮದಲ್ಲಿ  ತರಬೇತಿ ಮತ್ತು ಅನಾರೋಗ್ಯ ನೆಪದಲ್ಲಿ ಬಹಳ ದಿನಗಳಿಂದ ಗೈರಾಗುತ್ತಿರುವ ಶಿಕ್ಷಕರ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂರು ಜನ ಖಾಯಂ, ಓರ್ವ ಹೆಚ್ಚುವರಿ ಶಿಕ್ಷಕರ ಶಾಲೆಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಆದರೆ, ಸುಮಾರು 90 ಮಕ್ಕಳು ವಿದ್ತಾಭ್ಯಾಸ ಮಾಡುತ್ತಿರುವ ಶಾಲೆಗೆ ಕಳೆದ ಒಂದು ವಾರದಿಂದ ಒಬ್ಬರೇ ಶಿಕ್ಷಕ ಶಾಲೆಗೆ ಬಂದಿದ್ದಾರೆ.

ಉಳಿದ ಒಬ್ಬರು ತರಬೇತಿ ನಿಯೋಜನೆ ಮಾಡಲಾಗಿದೆ, ಮತ್ತೋಬ್ಬ ಶಿಕ್ಷಕ ಸುಮಾರು ಒಂದು ತಿಂಗಳಿಂದ ಗೈರಾಗಿದ್ದಾರೆ, ಹೆಚ್ಚುವರಿ ಶಿಕ್ಷಕರಿಗೆ ಅನಾರೋಗ್ಯ ಇರುವುದರಿಂದ ಶಾಲೆಯ ಮುಖ್ಯ ಶಿಕ್ಷಕರೊಬ್ಬರಿಂದಲೇ 90 ವಿದ್ಯಾರ್ಥಿಗಳಿಗೆ ಪಾಠ ಮಾಡಲಾಗುತ್ತಿದೆ. ನಿನ್ನೆ ಮುಖ್ಯ ಶಿಕ್ಷಕ ಸೇರಿ ಎಲ್ಲ ಶಿಕ್ಷಕರು ಗೈರಾಗಿದ್ದರ ಹಿನ್ನೆಲೆ ಗ್ರಾಮಸ್ಥರು ಶಾಲೆಗೆ ಕೀಲಿ ಹಾಕಿ ಪ್ರತಿಭಟನೆ ಮಾಡಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights