ಶಿರಸಿಯ ಬನವಾಸಿ ಭಾಗದಲ್ಲಿ ಆನೆ ದಾಳಿ : ಬೆಳೆ, ಫಸಲು ನಾಶ

ಉತ್ತರಕನ್ನಡ ಜಿಲ್ಲೆಯ ಶಿರಸಿಯ ಬನವಾಸಿ ಭಾಗದಲ್ಲಿ ಆನೆ ದಾಳಿ ನಡೆದಿದೆ. ಕಳೆದೆರಡು ದಿನಗಳಿಂದ ಮಧುರವಳ್ಳಿ ಭಾಗದಲ್ಲಿ ಬೀಡು ಬಿಟ್ಟಿರುವ ಆನೆಗಳು ರೈತರ ಹೊಲಗದ್ದೆಗಳಿಗೆ ನುಗ್ಗಿ ತೊಂದರೆ ಕೊಡುತಿದ್ದು ಬೆಳೆ,ಫಸಲನ್ನು ನಾಶಮಾಡತೊಡಗಿದೆ.

ಇದರಿಂದಾಗಿ ನಾಗರಿಕರು ರೈತರು ಆತಂಕದಿಂದ ಕಾಲ ಕಳೆಯಬೇಕಾಗಿದೆ ಇಷ್ಟು ದಿನ ಮುಂಡಗೋಡ ಕಡೆ ಇರುತ್ತಿದ್ದ ಗಜಪಡೆ ಮಧುರವಳ್ಳಿಯಲ್ಲಿ ಠಿಕಾಣಿ ಹೂಡಿದೆ‌. ಗುಂಪಿ ನಲ್ಲಿ ನಾಲ್ಕು ಆನೆಗಳಿದ್ದು, ನಾಗರಿಕರು ಕಂಗಾಲಾಗಿದ್ದಾರೆ.

ಮೊದಲ ಬಾರಿಗೆ ಆನೆಗಳು ಬನವಾಸಿಗೆ ನುಗ್ಗಿರುವುದಕ್ಕೆ ಜನತೆ ಅತಂಕಪಡುವಂತಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದು, ಆನೆಗಳನ್ನ ಓಡಿಸುವ ಪ್ರಯತ್ನ ನಡೆಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights