ಸಾಂಸ್ಕೃತಿಕ ನಗರಿಯಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ರೋಗಿಗಳ ಸಂಖ್ಯೆ….!

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಿನೇ ದಿನೇ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಜನರಲ್ಲಿ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ.

ಮೈಸೂರು ತಾಲೂಕು ಕಡಕೊಳ ಗ್ರಾಮದ ಜನರಲ್ಲಿ ಈ ಆತಂಕ ಮನೆ ಮಾಡಿದೆ. ಗ್ರಾಮಸ್ಥರು ಪ್ರತಿದಿನ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದು, ಪ್ರತಿ ದಿನ 20 ರಿಂದ 30 ಮಂದಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾಗುತ್ತಿದ್ದಾರೆ.

ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ರಾಜ್ಯ ಪರಿಸರ ಮಾಲಿನ್ಯ ಮಂಡಳಿ‌‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಾದ್ಯಂತ ಸ್ವಚ್ಛತೆ ಕಣ್ಮೆರೆಯಾಗಿದ್ದು ಕಲುಷಿತ ನೀರಿನಿಂದ ರೋಗ ಉಲ್ಭಣಗೊಳ್ಳುತ್ತಿದೆ. ಕುಡಿಯುವ ನೀರಿಗೆ ಮಲಿನ ನೀರು ಮಿಶ್ರಣವಾಗಿರುವ ಶಂಕೆಯಿಂದ ಅಧಿಕಾರಿಗಳು ಕುಡಿಯುವ ನೀರಿನ‌ ಸ್ಯಾಂಪಲ್ ಸಂಗ್ರಹಿಸಿದ್ದಾರೆ.

ಕಳೆದ ಮೂರು ದಿನಗಳಿಂದ ರೋಗಿಗಳು ಹೆಚ್ಚುತ್ತಿರುವುದರಿಂದ ಸಮರೋಪಾದಿಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಬೋರ್ ವೆಲ್ ನೀರನ್ನ ಸ್ಥಗಿತಗೊಳಿಸಿ, ಪರ್ಯಾಯ ನೀರಿಗೆ ವ್ಯವಸ್ಥೆ ಮಾಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights