ಸಾಲಬಾಧೆ ತಾಳದೇ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ…!

ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಇದಕ್ಕೆ ಸಾಕ್ಷಿಯಾಗಿ  ಮತ್ತೋರ್ವ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಲಬಾಧೆ ತಾಳದೇ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಯಳವತ್ತಿ ಗ್ರಾಮದಲ್ಲಿ ನಡೆದಿದೆ.

ಈರನಗೌಡ (೪೦) ಆತ್ಮಹತ್ಯೆ ಮಾಡಿಕೊಂಡ ರೈತ.  ಗ್ರಾಮ ಶಕ್ತಿ ಸಂಘದಲ್ಲಿ ೫ ಲಕ್ಷ , KVG ಬ್ಯಾಂಕ್ ನಲ್ಲಿ ೧ ಲಕ್ಷ ಸೇರಿದಂತೆ ಖಾಸಗಿಯಾಗಿಯೂ ಸಾಲ ಮಾಡಿಕೊಂಡಿದ್ದ. ಆದರೆ ಸಾಲ ತೀರಿಸಲಾಗದೆ ಮನ ನೊಂದು ಆತ್ಮಹತ್ಯ ಮಾಡಿಕೊಂಡಿದ್ದಾನೆ.

ಮನೆಯಲ್ಲಿ ಕ್ರಿಮಿನಾಶಕ ಸೇವಿಸಿದ್ದ ರೈತನನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ರೈತ ಸಾವನ್ನಪ್ಪಿದ್ದಾನೆ. ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights