ಸಾಲಬಾಧೆ ತಾಳಲಾರದೆ ನೇಣಿಗೆ ತಲೆ ಕೊಟ್ಟು ರೈತ ಆತ್ಮಹತ್ಯೆ….!
ಸಾಲಬಾಧೆ ಹಿನ್ನೆಲೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಗಾಣದ ಹೊಸೂರು ಗ್ರಾಮದಲ್ಲಿ ನಡೆದಿದೆ.
ಸ್ವಾಮೀಗೌಡ (೪೫) ಆತ್ಮಹತ್ಯೆ ಮಾಡಿಕೊಂಡ ರೈತ. ೧ ಎಕರೆ ಜಮೀನು ಹೊಂದಿದ್ದ ರೈತ ಕೃಷಿಗಾಗಿ ೩ ಲಕ್ಷ ಸಾಲ ಮಾಡಿದ್ದನು. ಸಾಲದ ಒತ್ತಡ ಹೆಚ್ಚಾದ್ರಿಂದ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮಾಡಲಾಗುತ್ತಿದೆ.