ಸಾಲಬಾಧೆ ತಾಳಲಾರದೆ ನೇಣಿಗೆ ತಲೆ ಕೊಟ್ಟು ರೈತ ಆತ್ಮಹತ್ಯೆ….!

ಸಾಲಬಾಧೆ ಹಿನ್ನೆಲೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಗಾಣದ ಹೊಸೂರು ಗ್ರಾಮದಲ್ಲಿ ನಡೆದಿದೆ.

ಸ್ವಾಮೀಗೌಡ (೪೫) ಆತ್ಮಹತ್ಯೆ ಮಾಡಿಕೊಂಡ ರೈತ. ೧ ಎಕರೆ ಜಮೀನು ಹೊಂದಿದ್ದ ರೈತ ಕೃಷಿಗಾಗಿ ೩ ಲಕ್ಷ ಸಾಲ ಮಾಡಿದ್ದನು.  ಸಾಲದ ಒತ್ತಡ ಹೆಚ್ಚಾದ್ರಿಂದ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮಾಡಲಾಗುತ್ತಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights