‘ಸಿದ್ದರಾಮಯ್ಯರನ್ನ ಕಾಂಗ್ರೆಸ್ ಕೈ ಬಿಟ್ಟರು ನಾವು ಕೈ ಬಿಡಲ್ಲ’ ಸಚಿವ ಸಿ.ಟಿ ರವಿ ವ್ಯಂಗ್ಯ
ಸಿದ್ದರಾಮಯ್ಯರನ್ನ ಕಾಂಗ್ರೆಸ್ ಕೈ ಬಿಟ್ಟರು ನಾವು ಕೈ ಬಿಡಲ್ಲ ಎಂದು ಮೈಸೂರಿನ ಅರಮನೆಯಲ್ಲಿ ಸಚಿವ ಸಿ.ಟಿ ರವಿ ವ್ಯಂಗ್ಯವಾಡಿದ್ದಾರೆ.
ಸಿದ್ದರಾಮಯ್ಯರನ್ನ ದಸರೆಗೆ ಆಹ್ವಾನ ನೀಡಿದ್ರಾ ಎಂಬ ಪ್ರಶ್ನೆಗೆ ಉತ್ತರ ಕೊಟ್ಟ ಸಚಿವ ರವಿ ಸಿದ್ದರಾಮಯ್ಯರನ್ನು ಸೇರಿಸಿಕೊಂಡೆ ದಸರಾ ಮಾಡುತ್ತೇವೆ. ಸೋಮಣ್ಣ ಪಕ್ಕದಲ್ಲಿ ನಿಂತಿದ್ದ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ದಿನನಿತ್ಯ ನನ್ನ ಸಂಪರ್ಕದಲ್ಲಿ ಇದ್ದಾರೆ. ಆಹ್ವಾನ ಪತ್ರಿಕೆ ಇನ್ನು ಮುದ್ರಣಕ್ಕೆ ಹೋಗಿಲ್ಲ. ಅವರನ್ನು ಆಹ್ವಾನಿಸಿಯೇ ದಸರಾ ಮಾಡುತ್ತೇವೆ. ನೀವು ಬನ್ನಿ ನಿಮ್ಮ ಜೊತೆ ಸಿದ್ದರಾಮಯ್ಯರ ಮನೆಗೆ ಹೋಗುತ್ತೇನೆ. ಸಚಿವ ವಿ.ಸೋಮಣ್ಣ ಮಾತಿನ ಮಧ್ಯೆ ಸಿದ್ದರಾಮಯ್ಯರನ್ನ ಕೈ ಬಿಡಲ್ಲ ಎಂದ ಸಚಿವ ಸಿ.ಟಿ.ರವಿ ಹೇಳಿ ವ್ಯಂಗ್ಯವಾಡಿದ್ದಾರೆ.