ಸಿದ್ದರಾಮಯ್ಯ ವಿರುದ್ಧ ಅಶ್ಲೀಲ ಪೋಸ್ಟ್‌ ಹಾಕಿದ್ದ ಯುವಕನ ಬಂಧನ!

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹಳೆಯ ಫೋಟೋ ಒಂದನ್ನು ಬಳಸಿಕೊಂಡು ಬಳಸಿಕೊಂಡು ಫೇಸ್‌ಬುಕ್‌ನಲ್ಲಿ ಅಶ್ಲೀಲ ಬರಹ ಹಾಗೂ ಫೋಟೋ ಪೋಸ್ಟ್‌ ಮಾಡಿದ್ದ ಬಾದಾಮಿಯ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 4 ವರ್ಷಗಳ ಹಿಂದೆ ಮಹಿಳೆಯೊಬ್ಬರು ಅವರಿಗೆ ವೇದಿಕೆಯಲ್ಲಿ ಕೆನ್ನೆಗೆ ಮುತ್ತು ಕೊಟ್ಟಿದ್ದು ಸುದ್ದಿಯಾಗಿತ್ತು. ಈಗ ಅದೇ ಫೋಟೋ ಬಳಸಿಕೊಂಡು ಸಿದ್ದರಾಮಯ್ಯನವರ ವಿರುದ್ಧ ಫೇಸ್‌ಬುಕ್‌ನಲ್ಲಿ ಯುವಕನೊಬ್ಬ ಅಶ್ಲೀಲವಾಗಿ ಪೋಸ್ಟ್‌ ಮಾಡಿದ್ದ.

ಮಾಜಿ ಸಿಎಂ ಸಿದ್ದರಾಮಯ್ಯ ಸ್ವಕ್ಷೇತ್ರ ಬಾದಾಮಿಯ ಖ್ಯಾಡ ಗ್ರಾಮದ ಸಂಗಪ್ಪ ಸಿದ್ರಾಮಣ್ಣವರ್‌ ಎಂಬಾತ ತನ್ನ ಮಹಾತ್ಮ ಗಾಂಧಿ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಅಶ್ಲೀಲವಾಗಿ ಪೋಸ್ಟ್‌ ಮಾಡಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ಬಾದಾಮಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತರೀಕೆರೆ ತಾಲೂಕು ಪಂಚಾಯಿತಿ ಸದಸ್ಯೆಯೊಬ್ಬರು 2016ರಲ್ಲಿ ವೇದಿಕೆಯಲ್ಲೇ ಸಿದ್ದರಾಮಯ್ಯನವರ ಕೆನ್ನೆಗೆ ಮುತ್ತು ನೀಡಿದ್ದರು. ಸಿದ್ದರಾಮಯ್ಯನವರ ಅಭಿಮಾನಿಯಾಗಿದ್ದ ನಾನು ರಾಜಕೀಯಕ್ಕೆ ಬರಲು ಅವರೇ ಸ್ಫೂರ್ತಿ. ಅವರನ್ನು ಹತ್ತಿರದಿಂದ ನೋಡಿ ಖುಷಿಯಾಗಿ ಮುತ್ತು ಕೊಟ್ಟೆ ಎಂದು ಅವರು ಹೇಳಿದ್ದರು.

ಆ ಫೋಟೋ ಮತ್ತು ವಿಡಿಯೋಗಳು ಆಗ ಸಾಕಷ್ಟು ವೈರಲ್ ಆಗಿದ್ದವು. ಈಗ ಅದೇ ಫೋಟೋವನ್ನು ಬಳಸಿಕೊಂಡು ಅಶ್ಲೀಲವಾಗಿ ಪೋಸ್ಟ್‌ ಶೇರ್‌ ಮಾಡಲಾಗಿತ್ತು. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತಹಶೀಲ್ದಾರ್ ಬಳಿ ಮುಚ್ಚಳಿಕೆ ಪತ್ರ ಬರೆಸಿಕೊಂಡು ಯುವಕನನ್ನು ಬಿಡುಗಡೆಗೊಳಿಸಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights