ಸ್ಕೂಟಿಗೆ ಬೈಕ್ ಸವಾರ ಡಿಕ್ಕಿ : ಹಾರಿ ಬಿದ್ದ ಸವಾರ – ಮೂವರಿಗೆ ಗಂಭೀರ ಗಾಯ…!
ಸ್ಕೂಟಿಲ್ಲಿ ಹೋಗುತ್ತಿದ್ದವರಿಗೆ ಹಿಂಬದಿಯಿಂದ ಬೈಕ್ ಸವಾರ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ.
ಬಾಳೆಹೊನ್ನೂರಿನ ಕಗ್ಗಿನಗದ್ದೆ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಸ್ಕೂಟಿಗೆ ಡಿಕ್ಕಿ ಹೊಡೆದು ರಸ್ತೆ ಬದಿ ಬೈಕ್ ಸವಾರ ಹಾರಿ ಬಿದ್ದಿದ್ದಾನೆ. ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ರು. ರಸ್ತೆಯ ಪಕ್ಕದಲ್ಲಿ ಕಲ್ಲಿನ ಕಟ್ಟೆಯಿದ್ದು, ಸ್ವಲ್ಪದರಲ್ಲೇ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇನ್ನೂ ಸ್ಕೂಟಿ ಸವಾರ ಹಾಗೂ ಸ್ಕೂಟಿಯ ಹಿಂಭಾಗ ಕುಳಿತಿದ್ದ ವ್ಯಕ್ತಿಗೂ ಸಣ್ಣಪುಟ್ಟ ಗಾಯಗಳಾಗಿವೆ.
ಕೂಡಲೇ ಸ್ಥಳೀಯರು ಗಾಯಾಳುಗಳ ರಕ್ಷಣೆಗೆ ಧಾವಿಸಿ ಎಲ್ಲರನ್ನು ಆಸ್ಪತ್ರೆಗೆ ಸೇರಿಸಿದರು. ಸ್ಕೂಟಿಗೆ ಬೈಕ್ ಡಿಕ್ಕಿ ಹೊಡೆಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದರಲ್ಲಿ ಹಿಂಬದಿಯಿಂದ ಬಂದ ಬೈಕ್ ಸವಾರನ ಅಜಾಗರೂಕತೆ ಎದ್ದು ಕಾಣುತ್ತಿದ್ದು, ಆತನ ಬೇಜವಾಬ್ದಾರಿತನದಿಂದಲೇ ಅಪಘಾತವಾಗಿದೆ.
It’s an awesome post in favor of all the online viewers;
they will get advantage from it I am sure.