ಸ್ನೇಹಿತರ ಜೊತೆ ಜಾತ್ರೆಗೆ ಹೋಗಿದ್ದ ಬಾಲಕಿ ಅನುಮಾನಾಸ್ಪದ ಸಾವು…!
ಎರಡು ದಿನದ ಹಿಂದೆ ಸ್ನೇಹಿತರ ಜೊತೆ ಜಾತ್ರೆಗೆ ಹೋಗಿದ್ದ ಬಾಲಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗ್ರಾಮವೊಂದರಲ್ಲಿ ನಡೆದಿದೆ.
ಒಂಭತ್ತು ವರ್ಷದ ನಾಲ್ಕನೇ ತರಗತಿ ಓದುತ್ತಿದ್ದ ಬಾಲಕಿ ಅನುಮಾನಾಸ್ಪದ ಸಾವನ್ನಪ್ಪಿದ್ದಾಳೆ. ನಿರ್ಜನ ಪ್ರದೇಶದಲ್ಲಿರುವ ಕೆರೆಯಲ್ಲಿ ಬಾಲಕಿ ಶವ ಪತ್ತೆಯಾಗಿದೆ. ಬಾಲಕಿ ಶನಿವಾರ ತನ್ನ ಸ್ನೇಹಿತರ ಜೊತೆ ಜಾತ್ರೆಗೆ ಹೋಗಿದ್ದಳು. ಬಾಲಕಿ ಮನೆಯವರು ಮನೆಯವರು ಸ್ನೇಹಿತರ ಮನೆಗೆ ಹೋಗಿರಬಹುದೆಂದು ಸುಮ್ಮನಾಗಿದ್ದರು.
ಭಾನುವಾರವೂ ಮನೆಗೆ ಬಾರದೇ ಇದ್ದಾಗ ಆತಂಕಗೊಂಡು ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ಹುಡುಕಾಟ ವೇಳೆ ಕೆರೆಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಹಿಮ್ಸ್ ಆಸ್ಪತ್ರೆಗೆ ಬಾಲಕಿ ಶವ ರವಾನೆ ಮಾಡಲಾಗಿದ್ದು, ಇಂದು ಬಾಲಕಿಯ ಮರಣೋತ್ತರ ಪರೀಕ್ಷೆ ನಡೆಯಲಿದೆ.