ಹಂದಿ ಬಂತು ಓಡಿ.. ಓಡಿ… : ಅಧಿಕಾರಿಗಳನ್ನ ಹಿಂಬಾಲಿಸಿ ಓಡಿಸಿದ ಸೂಕರ

ಘನತ್ಯಾಜ್ಯ ಘಟಕದ ಸ್ಥಳ ಪರಿಶೀಲನೆಗೆ ತೆರಳಿದ್ದ ಅಧಿಕಾರಿಗಳು ಹಾಗೂ ಸಾರ್ವಜನಿಕರ ಮೇಲೆ ಹಂದಿಗಳು ದಾಳಿ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ಸಾಗರ ರಸ್ತೆಯಲ್ಲಿನ ಪುರಸಭೆಯ ಘನತ್ಯಾಜ್ಯ ಘಟಕದ ಸ್ಥಳ ಪರಿಶೀಲನೆಗೆ ಪುರಸಭೆ ಅಧಿಕಾರಿಗಳು, ಪೊಲೀಸರು, ತಾಲೂಕು ಆಡಳಿತದ ಸಿಬ್ಬಂದಿ ಹಾಗೂ ಸ್ಥಳೀಯರು ತೆರಳಿದ್ದರು.

ಈ ಸಂದರ್ಭದಲ್ಲಿ ಕಸದ ರಾಶಿಯಲ್ಲಿದ್ದ ಹಂದಿಗಳು ಸ್ಥಳಕ್ಕೆ ತೆರಳಿದ್ದ ಅಧಿಕಾರಿಗಳು ಹಾಗೂ ಸಾರ್ವಜನಿಕರ ಮೇಲೆ ಏಕಾಏಕಿ ದಾಳಿಗೆ ನಡೆಸಿದ್ದು, ಈ ವೇಳೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವ ಅಧಿಕಾರಿ, ಸಾರ್ವಜನಿಕರಿಗೂ ಪೆಟ್ಟಾಗಿಲ್ಲ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights