ಹುಚ್ಚ ವೆಂಕಟ್ ಮೇಲೆ ಹಲ್ಲೆ; ಬೇಸರ ವ್ಯಕ್ತಪಡಿಸಿದ ದುನಿಯಾ ವಿಜಯ್

ಹುಚ್ಚ ವೆಂಕಟ್  ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿ ನಟ ಜಗ್ಗೇಶ್ ಬಳಿಕ ಇದೀಗ ದುನಿಯಾ ವಿಜಯ್ ಖಂಡಿಸಿದ್ದಾರೆ.

ಮಂಡ್ಯದಲ್ಲಿ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮೇಲೆ ನಡೆದ ಹಲ್ಲೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿತ್ತು. ಇಂದು ಒಬ್ಬ ರಾಜ ಭಿಕ್ಷೆ ಬೇಡಬಹುದು. ಅದೇ ಭಿಕ್ಷುಕ ನಾಳೆ ರಾಜನಾಗಬಹುದು. ನಾವು ಅವರ ಪರಿಸ್ಥಿತಿಯನ್ನು ವ್ಯಂಗ್ಯ ಮಾಡುವುದು ಮಾನವೀಯತೆಯಲ್ಲ ಎಂದು ನಟ ವಿಜಯ್ ಬೇಸರ ವ್ಯಕ್ತಪಡಿಸಿದ್ದಾರೆ.

ಹುಚ್ಚ ವೆಂಕಟ್ ಅವರಿಗೆ ಬೀದಿಯಲ್ಲಿ ಹೊಡೆಯುವ ವಿಡಿಯೋಗಳು ಕಳೆದ ಎರಡು ದಿನಗಳಿಂದ ವೈರಲ್ ಆಗಿವೆ. ‘ಹುಚ್ಚ’ ಎಂದು ಸ್ವತಃ ಹೇಳಿಕೊಂಡು ಚಿತ್ರರಂಗಕ್ಕೆ ಪ್ರವೇಶಿಸಿದರೂ ನಟನಾಗಿ, ನಿರ್ದೇಶಕನಾಗಿ ಹಾಗೂ ನಿರ್ಮಾಪಕನಾಗಿ ಕಾಣಿಸಿಕೊಂಡಿದ್ದರು.

ಬದುಕು ಯಾರ ಕೈಯಲ್ಲಿಯೂ ಇಲ್ಲ. ಇಂದು ಒಬ್ಬ ರಾಜ ಭಿಕ್ಷೆ ಬೇಡಬಹುದು. ಅದೇ ಭಿಕ್ಷುಕ ನಾಳೆ ರಾಜನಾಗಬಹುದು. ನಾವು ಅವರ ಪರಿಸ್ಥಿತಿಯನ್ನು ವ್ಯಂಗ್ಯ ಮಾಡುವುದು ಮಾನವೀಯತೆಯಲ್ಲ. ಹಾಗಾಗಿ ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ವ್ಯಕ್ತಿಯಲ್ಲಿ ದಯವಿಟ್ಟು ಯಾರೂ ಹಲ್ಲೆ ಮಾಡಬೇಡಿ ಎಂದು ಕಳಕಳಿಯಿಂದ ವಿನಂತಿಸುವುದಾಗಿ ನಟ ದುನಿಯ ವಿಜಯ್ ಬರೆದುಕೊಂಡಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights