ಹುಣಸೂರು ಕ್ಷೇತ್ರದಲ್ಲಿ ‘ಕೈ’ ಗೆಲುವು, ಬಾಡಿದ ಕಮಲ – ಅಧಿಕೃತ ಘೋಷಣೆ ಬಾಕಿ
ಡಿಸೆಂಬರ್ 5 ರಂದು ನಡೆದ ರಾಜ್ಯ ವಿಧಾನಸಭೆಯ ಕ್ಷೇತ್ರಗಳ ಉಪಚುನಾವನೆಯ ಫಲಿತಾಂಶ ಇಂದು ಬಹಿರಂಗವಾಗಲಿದ್ದು, 15 ಕ್ಷೇತ್ರಗಳಲ್ಲಿ ಮತ ಎಣಿಕೆ ಕಾರ್ಯ ಮುಗಿಯುತ್ತಾ ಬಂದಿದ್ದು, ಕೆಲವೇ ಗಂಟೆಗಳಲ್ಲಿ ಸ್ಪಷ್ಟ ಚಿತ್ರಣ ಸಿಗಲಿದೆ.
15 ಕ್ಷೇತ್ರಗಳ ಪೈಕಿ ಬಿಜೆಪಿ 11 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ , ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಮುನ್ನಡೆ, ಜೆಡಿಎಸ್ 1, ಕ್ಷೇತ್ರ, ಪಕ್ಷೇತರ ಅಭ್ಯರ್ಥಿ 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿವೆ .
ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದೆ. ಪ್ರತಿ ಮತೆ ಎಣಿಕೆ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಅರುಣ್ ಕುಮಾರ್ ಪೂಜಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಅರುಣ್ ಕುಮಾರ್ ಗೆಲುವು ಪಕ್ಕಾ ಆಗಿದೆ.
ಹುಣಸೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್. ವಿಶ್ವನಾಥ್ ಗೆ ಭಾರಿ ಮುಖಭಂಗ ಎದುರಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಹೆಚ್.ಪಿ.ಮಂಜುನಾಥ್ ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ.