ಹೊಲದಲ್ಲಿ ಗರ್ಭಿಣಿ ಮಹಿಳೆಗೆ ಕಾಣಿಸಿಕೊಂಡ ಹೆರಿಗೆ ನೋವು : ನೆರವಿಗೆ ಬಂದವರು ಇವರೇ ನೋಡಿ…
ಹೊಲದಲ್ಲಿ ಕಬ್ಬು ಕಟಾವು ಮಾಡಲು ಹೋದ ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು ಅಂಬ್ಯುಲೆನ್ಸ್ ಸಿಬ್ಬಂದಿಯೇ ಹೆರಿಗೆ ಮಾಡಿಸಿದ ಘಟನೆ ಬಾಗಲಕೋಟೆ ಜಿಲ್ಲೆ ಚೌಡಾಪೂರ ಗ್ರಾಮದ ಹೊರವಲಯದ ಜಮೀನಿನಲ್ಲಿ ನಡೆದಿದೆ.
ಹೌದು…. ಮಹಾರಾಷ್ಟ್ರ ಮೂಲದ ಗರ್ಭಿಣಿ ಮಹಿಳೆ ಕಬ್ಬು ಕಟಾವು ಮಾಡಲು ಕುಟುಂಬಸ್ಥರೊಂದಿಗೆ ಹೊಲಕ್ಕೆ ಬಂದಿದ್ದಾಳೆ. ಈ ವೇಳೆ ಆಕೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಮೊದಲ ಮಗು ಹೆರಿಗೆಯಾಗುತ್ತಲೇ ಸ್ಥಳಕ್ಕೆ ಆಗಮಿಸಿದ 108 ಸಿಬ್ಬಂದಿಗಳು, ಸ್ಥಳಕ್ಕೆ ತೆರಳಿದ ಅಂಬ್ಯುಲೆನ್ಸ್ ಸಿಬ್ಬಂದಿಗಳು 2ನೇ ಮಗುವಿನ ಹೆರಿಗೆ ಮಾಡಿಸಿದ್ದಾರೆ.
ಸುರಕ್ಷಿತ ಹೆರಿಗೆ ಮಾಡಿಸಿದ ರಾಂಪೂರ ಪ್ರಾಥಮಿಕ ಆರೋಗ್ಯ ಕೇಂದ್ರದ 108 ಸಿಬ್ಬಂದಿ ನಿಂಗಣ್ಣ ಮತ್ತು ಸದಾನಂದ, ಅವಳಿ-ಜವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ ಮನಿಷಾ ಚವ್ಹಾಣ ಸುರಕ್ಷಿತಾಗಿದ್ದಾರೆ ಎಂದು ತಿಳಿಸಿದ್ದಾರೆ.
ಎರಡು ಮಕ್ಕಳ ಹೆರಿಗೆ ಬಳಿಕ ಆಂಬುಲೆನ್ಸ್ ಮೂಲಕ ಬಾಗಲಕೋಟೆ ನವನಗರದಲ್ಲಿರೋ ಜಿಲ್ಲಾಸ್ಪತ್ರೆಗೆ ಬಾಣಂತಿ ಮನಿಷಾ ಮತ್ತು ಆರೋಗ್ಯವಾಗಿರೋ ಅವಳಿಜವಳಿ ಮಕ್ಕಳು ದಾಖಲಾಗಿದ್ದಾರೆ.