CAA ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ : ಹೆದ್ದಾರಿ ವಾಹನ ಸಂಚಾರ ಬದಲು
CAA ವಿರೋಧಿಸಿ ಇಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಸಮಾವೇಶ ಹಿನ್ನಲೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಬದಲಾವಣೆ ಮಾಡಲಾಗಿದೆ.
ಇಂದು ಮಾಧ್ಯಾಹ್ನ ನಂತರ ರಸ್ತೆ ಸಂಚಾರ ಬದಲಾವಣೆಗೆ ತೀರ್ಮಾನಿಸಲಾಗಿದೆ. ಬೆಂಗಳೂರಿನಿಂದ ಬರುವ ವಾಹನಗಳು ಮೆಲ್ಕಾರ್, ಕೊಣಾಜೆ, ತೊಕ್ಕೊಟ್ಟು ಮೂಲಕ ಮಂಗಳೂರಿಗೆ ಹೋಗಲು ಹಾಗೂ ಮಂಗಳೂರಿನಿಂದ ಬೆಂಗಳೂರು ಕಡೆ ಸಾಗುವ ವಾಹನಗಳು ಪಂಪ್ ವೆಲ್, ತೊಕ್ಕೊಟ್ಟು, ಕೊಣಾಜೆ, ಬಿ.ಸಿ.ರೋಡ್ ಮೂಲಕ ಬೆಂಗಳೂರಿಗೆ ಮಾರ್ಗ ಬದಲಾವಣೆ ಮಾಡಲಾಗಿದೆ.
ಉಡುಪಿಯಿಂದ ಬೆಂಗಳೂರು ಕಡೆಗೆ ಪಡುಬಿದ್ರೆ, ಕಾರ್ಕಳ, ಧರ್ಮಸ್ಥಳ, ಶಿರಾಡಿ ಮೂಲಕ ಬೆಂಗಳೂರಿಗೆ ತೆರಳುವ ಅವಕಾಶ ಕಲ್ಪಿಸಲಾಗಿದೆ. ಬಿ.ಸಿ.ರೋಡ್, ಕೈಕಂಬ, ಪೊಳಲಿ ಮೂಲಕವೂ ಮಂಗಳೂರು ಸಂಪರ್ಕಿಸಲು ಅವಕಾಶ ಮಾಡಿಕೊಡಲಾಗಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಅಡ್ಯಾರ್ ಪ್ರದೇಶ ಮಂಗಳೂರು ಹೊರವಲಯದ ಅಡ್ಯಾರ್ ಕಣ್ಣೂರಿನ ಶಹಾ ಗಾರ್ಡನ್ ಮೈದಾನದಲ್ಲಿ ಪ್ರತಿಭಟನೆ ಸಮಾವೇಶ ಮಾಡಲಾಗುತ್ತದೆ.