Congress : ಕೆಲವರ ಜೊತೆ ಏಗಲು ಆಗಲ್ಲ,ವೀಕ್ಷಕರಿಗೆ ನಿಲುವು ಸ್ಪಷ್ಟಪಡಿಸಿದ ಮಾಜಿ ಸಿಎಂ…
ರಾಜ್ಯ ಖಾಂಗ್ರೆಸ್ನ ಕೆಲ ನಾಯಕರ ಧೋರಣೆ ವಿರುದ್ಧ ಅಸಮಾಧಾನ ಹೊರಹಾಕಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ನೀಡಿರುವ ರಾಜಿನಾಮೆ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯ ಕಾಂಗ್ರೆಸಿನಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ವೀಕ್ಷಕರಾಗಿ ಬಂದಿದ್ದ ಮಧುಸೂದನ್ ಮಿಸ್ತ್ರಿ ಹಾಗೂ ಭಕ್ತ ಚರಣದಾಸ ಅವರು ತಮ್ಮನ್ನು ಭೇಟಿ ಮಾಡಿದ್ದ ವೇಳೆ ಸಿದ್ದರಾಮಯ್ಯ ಅವರು ತಮ್ಮ ನಿಲುವು ಪುನರುಚ್ಛರಿಸಿದ್ದಾರೆ ಎಂದು ತಿಳಿದುಬಂದಿದೆ.
ಪಕ್ಷದ ವಿಚಾರ ಬಮದಾಗ ಸ್ವಹಿತ ಮರೆತು ದುಡಿಯುವ ನಾಯಕರು ಬೇಕು. ಇಲ್ಲಿ ಕೆಲವರ ಜೊತೆ ಹೊಂದಾಣಿಕೆ ಮಾಡಿಕೊಂಡು ಹೋಗುವುದೇ ಕಷ್ಟವಾಗಿದೆ. ಹೀಗಿದ್ದಾಗ ಪಕ್ಷವನ್ನು ಸದೃಢವಾಗಿ ಕಟ್ಟಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ವೀಕ್ಷಕರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಹೈಕಮಾಂಡ್ ಯಾರಿಗೇ ಜವಾಬ್ದಾರಿ ಹೊರಿಸಿದರೂ ಅವರಿಗೆ ತಮ್ಮ ಬೆಂಬಲ ನೀಡುವುದಾಗಿ ಸಿದ್ದರಾಮಯ್ಯ ಹೇಳಿದ್ದು, ಯಾವುದೇ ಕಾರಣಕ್ಕೂ ತಮ್ಮ ರಾಜೀನಾಮೆ ವಿಷಯದಲ್ಲಿ ರಾಜೀ ಇಲ್ಲ ಎಂದುದನ್ನು ಸ್ಪಷ್ಟಪಡಿಸಿದ್ದಾರೆ ಎಂದು ಮೂಲಗಳು ಹೇಳಿವೆ.