Corona: ಸೋಂಕು ಹೆಚ್ಚಾದರೆ ತೆರೆದ ಆಸ್ಪತ್ರೆಗಳ ಆರಂಭ: ಶ್ರೀ ರಾಮುಲು

ರಾಜ್ಯದಲ್ಲಿ ಜೂನ್ ಮತ್ತು ಜುಲೈನಲ್ಲಿ ಕೊರೊನಾ ಸೋಂಕು ಪ್ರಕರಣಗಳು ಮತ್ತಷ್ಟು ವ್ಯಾಪಕವಾಗಿ ಹೆಚ್ಚಾಗುವ ಸಾಧ್ಯತೆಯಿದೆ. ಹಾಗಾಗಿ ಸೋಂಕಿನ ಪ್ರಯಾಣ ಹೆಚ್ಚಾದರೆಎಲ್ಲ ಜಿಲ್ಲೆಗಳಲ್ಲಿ ತೆರೆದ ಆಸ್ಪತ್ರೆಗಳನ್ನು ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ಸೋಂಕಿತರಿಗೆ ಚಿಕಿತ್ಸೆ ನೀಡಲು ಮೈದಾನ, ಕ್ರೀಡಾಂಗಣದಂತಹ ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ಮುಕ್ತ ಆಸ್ಪತ್ರೆಗಳನ್ನು ಆರಂಭಿಸಿ ವ್ಯವಸ್ಥೆ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. ಈ ಬಗ್ಗೆ  ಕಾರ್ಯಪಡೆ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು, ಗ್ರಾಮೀಣ ಭಾಗಕ್ಕೆ ಸೋಂಕು ಹರಡದಂತೆ ತಡೆಯಲು  ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಎಂಬಿಬಿಎಸ್ ವೈದ್ಯರಂತೆ  ಆಯುಷ್ ವೈದ್ಯರ ವೇತನ ತಾರತಮ್ಯ ನಿವಾರಿಸುವ ಕುರಿತು ಮಂಗಳವಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬಿ.ಶ್ರೀರಾಮುಲು ಹೇಳಿದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights