Delhi violence : ಗಲಭೆಗೊಳಗಾದ ಪ್ರದೇಶದಲ್ಲಿ ನೀರವ ಮೌನ, ಸಾಮಾನ್ಯ ಸ್ಥಿತಿಯತ್ತ ದೆಯಲಿ..

ಸೋಮವಾರದಿಂದ ಹಿಂಸಾಚಾರಕ್ಕೆ ಒಳಗಾಗಿದ್ದ ಈಶಾನ್ಯ ದೆಹಲಿ ಸಾಮಾನ್ಯ ಸ್ಥಿತಿಗೆ ಬಂದಿದೆ. ಕೆಲವೇ ಅಂಗಡಿಗಳು ತೆರೆದಿವೆಯಾದರು ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಇನ್ನೂ ಜನಸಂಚಾರ ವಿರಳವಾಗಿದೆ. ಈ ಪ್ರದೇಶದ ನಿವಾಸಿಗಳು ಅಲ್ಲಿಂದ ಹೊರ ಹೋಗಿದ್ದರಿಂದ ಅಲ್ಲಿ ಇನ್ನೂ ನೀರವ ಮೌನವಿದೆ ಎಂದು ಎನ್ಡಿಟಿವಿ ವರದಿ ಮಾಡಿದೆ.

ಈಶಾನ್ಯ ದೆಹಲಿಯ ಹೆಚ್ಚಿನ ಪ್ರದೇಶಗಳಲ್ಲಿ ವಾಹನ ಸಂಚಾರ ಸಾಮಾನ್ಯವಾಗಿದೆ ಮತ್ತು ಜನರು ಕೆಲಸಕ್ಕೆ ಹೋಗಲು ಪ್ರಾರಂಭಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ಪಡೆ, ಪೊಲೀಸರು ಮತ್ತು ಅರೆಸೈನಿಕ ಪಡೆಗಳು ಆಯಕಟ್ಟಿನ ಜಾಗದಲ್ಲಿ ಬೀಡು ಬಿಟ್ಟಿದ್ದಾರೆ. ರಸ್ತೆ ತಡೆಗಳನ್ನು ಮತ್ತು ಸುಟ್ಟುಹೋದ ವಾಹನಗಳನ್ನು ತೆರವುಗೊಳಿಸಲು ಕ್ರೇನ್‌ಗಳು ಮತ್ತು ಬುಲ್ಡೋಜರ್‌ಗಳು ಕಾರ್ಯನಿರ್ವಹಿಸುತ್ತಿವೆ.

ಸಮುದಾಯಗಳ ನಡುವೆ ಸಾಮರಸ್ಯಕ್ಕಾಗಿ ದೆಹಲಿ ಪೊಲೀಸರು ಶಾಂತಿ ಸಭೆಗಳನ್ನು ನಡೆಸುತ್ತಿದ್ದಾರೆ. ಇಲ್ಲಿಯವರೆಗೆ ಸುಮಾರು 330 ಸಭೆಗಳನ್ನು ಆಯೋಜಿಸಲಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ. ಸಹಾಯಕ್ಕಾಗಿ 22829334 ಮತ್ತು 22829335 ನಂಬರಿನ ಸಹಾಯವಾಣಿಗಳನ್ನು ಪ್ರಾರಂಭಿಸಿದೆ.

ಹಿಂಸಾಚಾರದಲ್ಲಿ ನಲವತ್ತೆರಡು ಜನರು ಮೃತಪಟ್ಟಿದ್ದಾರೆ. ನೂರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಬಗ್ಗೆ 500ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights