ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ : ನಿರಾಳಗೊಂಡ ಜನ
ಹಾಸನ ತಾಲೂಕಿನ ಹಳೇಕೊಪ್ಪಲು ಗ್ರಾಮದಲ್ಲಿ ಜನರಿಗೆ ಆತಂಕ ಸೃಷ್ಟಿಸಿದ್ದ ಚಿರತೆ ಸದ್ಯ ಅರಣ್ಯ ಇಲಾಖೆ ಇಟ್ಟಿದ್ದ ಬೋನಿ ಬಿದ್ದಿದೆ.
ಹಳೇಕೊಪ್ಪಲು ಗ್ರಾಮದ ಸುತ್ತಮುತ್ತ ಉಪಟಳ ನೀಡುತ್ತಿದ್ದ ಚಿರತೆ, ಹಸು, ಕರು, ನಾಯಿಗಳನ್ನ ಹೊತ್ತೊಯುತ್ತಿತ್ತು. ಇದರಿಂದ ಅರಣ್ಯ ಇಲಾಖೆಗೆ ಜನ ದೂರು ಕೂಡ ನೀಡಿದ್ದರು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಚಿರತೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಚಿರತೆ ಸದ್ಯ ಅರಣ್ಯ ಇಲಾಖೆಯ ವಶದಲ್ಲಿದೆ.
ಇದೇ ಗ್ರಾಮದಲ್ಲಿ ಈವರೆಗೂ ಬೋನಿಗೆ ಬಿದ್ದ ಎರಡು ಚಿರತೆಗಳು ಬಿದ್ದಿವೆ. ಕಳೆದ ತಿಂಗಳು ಕೂಡ ಚಿರತೆಯೊಂದು ಬೋನಿಗೆ ಬಿದ್ದಿತ್ತು. ಈ ಬಾರಿ ಇದೇ ಗ್ರಾಮದಲ್ಲಿ ಮತ್ತೊಂದು ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಚಿರತೆ ನೋಡಲು ಅಕ್ಕಪಕ್ಕದ ಗ್ರಾಮಗಳ ಜನರು ಮುಗಿಬಿದ್ದಿದ್ದಾರೆ.