ಪೌರತ್ವ ಕಾಯ್ದೆ ಜಾರಿ ವಿರೋಧಿಸಿ ಶಿವಮೊಗ್ಗದಲ್ಲಿ ಉಪವಾಸ ಸತ್ಯಾಗ್ರಹ , ಮೈಸೂರಿನಲ್ಲಿ ಪ್ರೊಟೆಸ್ಟ್

ಪೌರತ್ವ ಕಾಯ್ದೆ ಜಾರಿ ವಿರೋಧಿಸಿ ಶಿವಮೊಗ್ಗದಲ್ಲಿ ಉಪವಾಸ ಸತ್ಯಾಗ್ರಹ , ಮೈಸೂರಿನಲ್ಲಿ ಪ್ರೊಟೆಸ್ಟ್ ಮಾಡಲಾಗುತ್ತಿದೆ.

ಶಿವಮೊಗ್ಗದಲ್ಲಿ ಪೌರತ್ವ ಕಾಯ್ದೆ ಜಾರಿ ವಿರೋಧಿಸಿ ಜಿಲ್ಲಾ ಕಾಂಗ್ರೇಸ್ ಘಟಕದಿಂದ ಉಪವಾಸ ಸತ್ಯಾಗ್ರಹ ಮಾಡಲಾಗುತ್ತಿದೆ. ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಸೇರಿಂದತೆ ಕಾಂಗ್ರೇಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

NRC ಮತ್ತು CAB ಜಾರಿ ವಿರೋಧಿಸಿ ಮಾಜಿ ಎಂ.ಎಲ್.ಎ. ಪ್ರಸನ್ನ ಕುಮಾರ್, ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಉಪವಾಸ ಸತ್ಯಾಗ್ರಹ ಕುಳಿತಿದ್ದಾರೆ. ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ ಮಸೂದೆ ಮಂಡಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸಂವಿಧಾನ ವಿರೋದಿಯಾಗಿದೆ ಎಂದು ಆರೋಪ ಮಾಡಲಾಗಿದೆ.ನಗರದ ಗಾಂಧಿ ಪಾರ್ಕ್ ಮುಂಭಾಗದಲ್ಲಿ ಪ್ರತಿಭಟನೆ ಮಾಡಲಾಗುತ್ತಿದ್ದು, ಸಂವಿಧಾನ ರಕ್ಷಿಸಿ, ಪ್ರಜಾಪ್ರಭುತ್ವ ಉಳಿಸಿ ಎಂದು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರುಘೋಷಣೆ ಕೂಗುತ್ತಿದ್ದಾರೆ.

ಇನ್ನೂ ಕೇಂದ್ರದ ಪೌರತ್ವ ಮಸೂದೆ ವಿರೋಧಿಸಿ ಮೈಸೂರಿನಲ್ಲೂ ಪ್ರೊಟೆಸ್ಟ್ ಮಾಡಲಾಗುತ್ತಿದೆ..ಮೈಸೂರು ಜಿಲ್ಲೆಯ ಹುಣಸೂರಿನ ತಾಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ಮಾಡಲಾಗುತ್ತಿದೆ.

ಎಸ್‌ಡಿಪಿಐ, ಬಿಎಸ್‌ಪಿ ಸೇರಿ ಪ್ರಮುಖ ಮುಸ್ಲಿಂ ಸಂಘಟನೆ ಸಾವಿರಾರು ಮುಸ್ಲಿಂ ಸಮುದಾಯದವ್ರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಸ್ವಾತಂತ್ರ್ಯ ಕೊಡಿ ಸ್ವಾತಂತ್ರ ಕೊಡಿ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಇದು ಕೇಂದ್ರದ ಕರಾಳ ಮಸೂದೆ ಎಂದು ಬಿಎಸ್‌ಪಿ ಮುಖಂಡನ‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಈ ಮಸೂದೆ ಹಿಂಪಡಿಯುವಂತೆ ಒತ್ತಾಯ ಮಾಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights