ಬಾಗಲಕೋಟೆಯಲ್ಲಿ ನಿಷೇಧಾಜ್ಞೆ ಮಧ್ಯೆಯೂ ಕರವೇ ಜಿಲ್ಲಾದ್ಯಕ್ಷನ ಏಕಾಂಗಿ ಪ್ರತಿಭಟನೆ…

ಬಾಗಲಕೋಟೆಯಲ್ಲಿ ನಿಷೇಧಾಜ್ಞೆ ಮಧ್ಯೆಯೂ ಕರವೇ ಜಿಲ್ಲಾದ್ಯಕ್ಷನ ಏಕಾಂಗಿ ಪ್ರತಿಭಟನೆ ನಡೆದಿದೆ.

ಪೌರತ್ವ,ಹಾಗೂ ರಾಷ್ಟ್ರೀಯ ಪೌರತ್ವ ನೊಂದಣಿ ಕಾಯ್ದೆ ಜಾರಿ ವಿರೋಧಿಸಿ ಕರವೇ ಜಿಲ್ಲಾಧ್ಯಕ್ಷ ರಮೇಶ್ ಬದ್ನೂರ ಏಕಾಂಗಿ ಪ್ರತಿಭಟನೆ ಮಾಡುತ್ತಿದ್ದಾರೆ. ನವನಗರದ ಜಿಲ್ಲಾಡಳಿತ ಭವನದ ಎದುರು ರಮೇಶ್ ಬದ್ನೂರ ಸಿಎಎ ಮತ್ತು ಎನ್ಆರ್ ಸಿ ಕಾಯ್ದೆ ಜಾರಿ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸಕಾ೯ರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ಪ್ರತಿಭಟನೆ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ಪೋಲಿಸರ ಮಧ್ಯೆ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭವನದ ಸುತ್ತ ಪೋಲಿಸ್ ಭದ್ರತೆ ನಿಯೋಜನೆ ಮಾಡಲಾಗಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights