ಭಟ್ಕಳದಲ್ಲಿ ಪೌರತ್ವ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ-ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್!

ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಉತ್ತರಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.ಪಟ್ಟಣದ ತಂಜೀಮ್ ಸಂಸ್ಥೆ ವತಿಯಿಂದ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಸಾವಿರಾರು ಮುಸಲ್ಮಾನ ಬಾಂಧವರು ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಭಟ್ಕಳ ನಗರದಾಧ್ಯಾಂತ ಅಂಗಡಿ ಮುಂಗಟ್ಟುಗಳು ಬಂದ್ ಮಾಡಲಾಗಿದ್ದು ಬಿಗಿ ಪೋಲಿಸ್ ಬಂದವಸ್ತ್ ಕಲ್ಪಿಸಲಾಗಿತ್ತು.

ಪಟ್ಟಣದ ಸ್ಪೋರ್ಟ್ಸ್ ಕ್ಲಬ್ ಮೈದಾನದಿಂದ ಪ್ರತಿಭಟನೆ ಪ್ರಾರಂಭವಾಗಿ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿಯನ್ನ ಸಲ್ಲಿಸಲಿದ್ದಾರೆ. ಇದಾದ ನಂತರ ಅಂಜುಮನ್ ಮೈದಾನದಲ್ಲಿ ಸಮಾವೇಶವನ್ನ ನಡೆಸಿ ಕೇಂದ್ರ ಸರ್ಕಾರ ಕಾಯ್ದೆಯನ್ನ ಹಿಂಪಡೆಯುವಂತೆ ಆಗ್ರಹಿಸಲಿದ್ದಾರೆ. ಪ್ರತಿಭಟನೆಯಲ್ಲಿ ಐದು ಸಾವಿರಕ್ಕೂ ಹೆಚ್ಚು ಮುಸ್ಲಿಂ ಜನರು ಭಾಗಿಯಾಗಿದ್ದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights