ರಸ್ತೆ ಬದಿಯಲ್ಲಿ ಮಲಗಿದ್ದ ಏಳು ಜನ ಭಕ್ತಾದಿಗಳ ಮೇಲೆ ಹರಿದ ಬಸ್ಸು….!
ರಾತ್ರಿ ನೆಮ್ಮದಿಯಾಗಿ ಮಲಗಿದ್ದ ಭಕ್ತರು ನಿದ್ರೆಯಲ್ಲೆ ಪ್ರಾಣ ಬಿಟ್ಟಿದ್ದಾರೆ. ಅದು ಹೇಗೆ ಗೊತ್ತಾ..? ಗೊತ್ತಾದ್ರೆ ನೀವು ಒಂದು ಕ್ಷಣ ದಂಗಾಗಿ ಹೋಗ್ತೀರಾ..
ಹೌದು… ರಸ್ತೆ ಬದಿಯಲ್ಲಿ ಮಲಗಿದ್ದ ಏಳು ಜನ ಭಕ್ತಾದಿಗಳ ಮೇಲೆ ಬಸ್ಸು ಹರಿದು ಸಾವಿಗೀಡಾದ ದಾರುಣ ಘಟನೆ ನಡೆದಿದೆ. ಈ ಘಟನೆ ಉತ್ತರಪ್ರದೇಶದ ಬುಲಂದ್ ಶಹರ್ ಜಿಲ್ಲೆಯಲ್ಲಿ ನಡೆದಿದ್ದು, ಈ ಭಕ್ತಾದಿಗಳು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಮೃತಪಟ್ಟವರಲ್ಲಿ ನಾಲ್ಕು ಮಹಿಳೆಯರು ಹಾಗೂ ಮೂರು ಮಕ್ಕಳು ಸೇರಿದ್ದಾರೆ.
ಈ ಘಟನೆಯ ನಂತರ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆತನ ಪತ್ತೆಗೆ ಬಲೆ ಬೀಸಿದ್ದಾರೆ.