ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ಪತ್ರಕರ್ತ ಗೌರೀಪುರ ಚಂದ್ರು ನಿಧನ!
ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಮುಖ್ಯ ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಹಿರಿಯ ಪತ್ರಕರ್ತ ಗೌರೀಪುರ ಚಂದ್ರ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಅವರು, ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂದು ಹೇಳಲಾಗಿದೆ.
ಗುರುವಾರ ಬೆಳಗ್ಗೆ ಪ್ರಜ್ಞತಪ್ಪಿ ಕುಸಿದು ಬಿದ್ದಿದ್ದ ಅವರು ಮತ್ತೆ ಚೇತರಿಸಿಕೊಳ್ಳಲಿಲ್ಲ. ಅಲ್ಲದೆ, ಮರೋತ್ತರ ಪರೀಕ್ಷೆಯಲ್ಲಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಮಾಹಿತಿ ದೊರೆತಿದೆ.
ಮೂಲತಃ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಗೌರೀಪುರದ ಚಂದ್ರು ಅವರು ಎಂಜಿನಿಯರಿಂಗ್ ಪದವೀದರರಾಗಿದ್ದು, ಪತ್ರಿಕಾ ವೃತ್ತಿಯನ್ನು ಅನುಸರಿಸುತ್ತಿದ್ದರು. ವಿಜಯ ಕರ್ನಾಟಕದ ಮ್ಯಾಗಜಿನ್ ‘ಬೋಧಿವೃಕ್ಷ’ದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.