ಕೊರೊನಾ ಹೆಸರಲ್ಲಿ ಕೋಟಿ ಕೋಟಿ ಅವ್ಯವಹಾರ : ಸರ್ಕಾರದ ವಿರುದ್ಧ ಸಂಸದ ಪ್ರಜ್ವಲ್ ಗಂಭೀರ ಆರೋಪ
ರಾಜ್ಯ ಸರ್ಕಾರ ಕೊರೊನಾ ಹೆಸರಲ್ಲಿ 40 ಕೋಟಿಗೂ ಹೆಚ್ಚು ಅವ್ಯವಾರ ಮಾಡಿದೆ ಎಂದು ಹಾಸನ ಜಿಲ್ಲೆ ಅರಕಲಗೂಡಿನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಸರ್ಕಾರದ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ.
ಹೌದು… ಪಟ್ಟಣ ಪಂಚಾಯತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣದ ಹೆಸರಿನಲ್ಲಿ ಬಾರಿ ಲೂಟಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಬೆನ್ನಲ್ಲೆ ಚಿಕಿತ್ಸೆಗೆ ವೆಂಟಿಲೇಟರ್ ಅವಶ್ಯಕತೆ ಇದ್ದು, ಒಂದು ವೆಂಟಿಲೇಟರ್ಗೆ 8.5 ಲಕ್ಷ ಚಾರ್ಜ್ ಮಾಡಿದೆ. ಅದೇ ವೆಂಟಿಲೇಟರ್ ನ್ನ ಕೇವಲ 2.5 ಲಕ್ಷಕ್ಕೆ ನನ್ನ ಸಂಸದ ನಿಧಿಯಿಂದ ಸಕಲೇಶಪುರ ಆಸ್ಪತ್ರೆಗೆ ನೀಡಿದ್ದೆನೆ. ರಾಜ್ಯ ಸರ್ಕಾರ ಕೊರೊನಾ ಹೆಸರಲ್ಲಿ 40 ಕೋಟಿಗೂ ಹೆಚ್ಚು ಅವ್ಯವಾರ ಮಾಡಿದೆ. ಇದರ ಬಗ್ಗೆ ಸಮಗ್ರ ತನಿಖೆ ಮಾಡಬೇಕು. ಸಾರ್ವಜನಿಕರ ಹಣ ದುರುಪಯೋಗ ಆಗುತ್ತಿದೆ. ಕೇಂದ್ರ ಸರ್ಕಾರಕ್ಕೆ ದಾಖಲೆ ಮೂಲಕ ತನಿಖೆಗೆ ಒತ್ತಾಯಿಸುತ್ತೇನೆ ಎಂದಿದ್ದಾರೆ.