ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಶಾಸಕನ ಶವ ಪತ್ತೆ: ಕೊಲೆ ಶಂಕೆ

ಪಶ್ಚಿಮ ಬಂಗಾಳ ರಾಜ್ಯದ ಬಿಜೆಪಿ ನಾಯಕ ದೇಬೇಂದ್ರ ನಾಥ್‌ ರಾಯ್ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಪಶ್ಚಿಮ ಬಂಗಾಳದ ವಿಧಾನ ಸಭಾ ಕ್ಷೇತ್ರ ಹೆಮತಾಬಾದ್‌ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಶಾಸಕರಾಗಿ  ಆಯ್ಕೆಯಾಗಿದ್ದ ದೇಬೇಂದ್ರ ನಾಥ್‌ ರಾಯ್‌ ಅವರು ಉತ್ತರ ದಿನಾಜ್‌ಪುರ್‌ ಜಿಲ್ಲೆಯಲ್ಲಿರುವ ತಮ್ಮ ನಿವಾಸದ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆ ಎಂದು ಹೇಳಲಾಗುತ್ತಿದ್ದರೂ, ಕೊಲೆಯ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

“ಅವರನ್ನು ಕೊಲೆ ಮಾಡಲಾಗಿದ್ದು, ನಂತರ ನೇಣು ಬಿಗಿಯಲಾಗಿದೆ ಎಂದು ಜನರು ಅಭಿಪ್ರಾಯ ವ್ಯಕ್ತಪಡಿಸಿರುವುದಾಗಿ” ಪಶ್ಚಿಮ ಬಂಗಾಳದ ರಾಜ್ಯ ಬಿಜೆಪಿ ಆರೋಪಿಸಿದೆ.

(ಮೂಲ: ಪಿಟಿಐ, ಎಎನ್‌ಐ)

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights