ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಕ್ವಾರಂಟೈನ್!
ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸ ಎಲ್ಲೆ ಮೀರುತ್ತಿದ್ದು, ಬೆಂಗಳೂರು ಕಮಿಷನರ್ ಕಚೇರಿಗೂ ಲಗ್ಗೆ ಇಟ್ಟಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ತಮ್ಮ ಮನೆಯಲ್ಲಿಯೇ ಹೋಂ ಕ್ವಾರಂಟೇನ್ಗೆ ಒಳಗಾಗಿದ್ದಾರೆ.
ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರ ಕಾರು ಚಾಲಕನಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹಾಗಾಗಿ ಭಾಸ್ಕರ್ ರಾವ್ ಸ್ವತಃ ಗೃಹ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ಭಾಸ್ಕರ್ ರಾವ್ ಅವರ ಕಾರು ಚಾಲಕನಿಗೆ ಎರಡು ದಿನಗಳಿಂದ ಕೊರೊನಾ ರೋಗ ಲಕ್ಷಣಗಳು ಕಾಣಿಸಿಜಕೊಂಡ ಹಿನ್ನೆಲೆಯಲ್ಲಿ ಕೊರೊನಾ ತಪಾಸಣೆಗೆ ಒಳಗಾಗಿದ್ದರು. ಪರೀಕ್ಷೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಕಮಿಷನರ್ ಭಾಸ್ಕರ್ ರಾವ್ ಅವರು ಕಾರು ಚಾಲಕರ ಜೊತೆಗೆ ಪ್ರಥಮಿಕ ಸಂಪರ್ಕ ಹೊಂದಿದ್ದರಿಂದಾಗಿ ಅವರೂ ಕೂಡ ಹೋಂ ಕ್ವಾರಂಟೈನ್ಗೆ ಒಳಗಾಗಿರುವುದಾಗಿ ತಿಳಿಸಿದ್ದಾರೆ.