ರಾಜ್ಯದಲ್ಲಿ ಕೊರೊನಾ ನಿಯಂತ್ರಣ ತಪ್ಪುತ್ತಿದೆ – ಸಿಎಂ ಯಡಿಯೂರಪ್ಪ ಕಳವಳ

ರಾಜ್ಯದಲ್ಲಿ ದಿನವೊಂದಕ್ಕೆ ಎರಡು ಸಾವಿರಕ್ಕೂ ಹೆಚ್ಚು ಕೊರೋನಾ ಸೋಂಕಿತರ ಪ್ರಕರಣಗಳು ದಾಖಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಸಿ ಬಳಿಕ ಮಾತನಾಡಿದ ಸಿಎಂ  ರಾಜ್ಯದಲ್ಲಿ ಕೊರೊನಾ ಕಂಟ್ರೋಲ್ ತಪ್ಪಿದೆ ಎಂದಿದ್ದಾರೆ.

ಕೇಂದ್ರ ತಂಡ ಈಗಾಗಲೇ ರಾಜ್ಯಕ್ಕೆ ಭೇಟಿ ನೀಡಿದ್ದು, ರಾಜ್ಯ ಸರ್ಕಾರ ಕೈಗೊಂಡ ಕೆಲ ನಿಯಮಗಳ ಬಗ್ಗೆ ಮೆಚ್ಚುಗೆ ಸೂಚಿಸಿದೆ ಎಂದಿದ್ದಾರೆ.  ಹತ್ತು ಸಾವಿರ  ಬೆಡ್ ಗಳ ವ್ಯವಸ್ಥೆ ಮಾಡಲಾಗಿದ್ದು, ಪರಿಶೀಲನೆಗೆ ತೆರಳಿದ್ದೇನೆ ಎಂದಿದ್ದಾರೆ.

ಇದರ ಜೊತೆಗೆ ರಾಜ್ಯದಲ್ಲಿ ಅಂಬುಲೆನ್ಸ್ ಗಳ ಕೊರತೆ ಇದೆ. ಅದರವ್ಯವಸ್ಥೆ ಮಾಡಲು ಸೂಚಿಸಿದ್ದೇನೆ. ಜಿಲ್ಲಾಧಿಕಾರಿಗಳು ಹಗಲಿರುಳು ಕೆಲಸ ಮಾಡಿದರೂ ಕೊರೊನಾ ಕಂಟ್ರೋಲ್ ತಪ್ಪುತ್ತಿದೆ. ನಾಳೆ ಸುದ್ದಿಗೋಷ್ಠಿ ಕರೆದಿದ್ದೇನೆ ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights