ರಾಜ್ಯದಲ್ಲಿ ದಿನಕ್ಕೆ ಸಾವಿರ ಗಡಿ ಮುಟ್ಟಿದ ಕೊರೊನಾ; ಇಂದು 20 ಸಾವು!

ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಬ್ರೇಕ್‌ ಬೀಳುವುದು ಅನುಮಾನವಾಗಿದೆ. ಇಂದು ಒಂದೇ ದಿನ ಕೊರೊನಾ ಸೋಂಕಿತರ ಪ್ರಮಾಣದ ಸಾವಿರದ ಗಡಿ ದಾಟಿದೆ. ಕರ್ನಾಟಕದಲ್ಲಿ  ಇಂದು  947 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಬೆಂಗಳೂರಿನಲ್ಲಿಯೇ 503 ಜನಕ್ಕೆ ಸೋಂಕು ತಗುಲಿದೆ. ಅಲ್ಲದೆ, 20 ಮಂದಿ ಸಾವಿಗೀಡಾಗಿದ್ದಾರೆ.

ಇದರಿಂದಾಗಿ, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15242 ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆಯೂ 246ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಇಂದಿನ Heath Bulletienನಲ್ಲಿ ತಿಳಿಸಿದೆ.

ನಾಳೆಯಿಂದ ದೇಶದಾದ್ಯಂತ ಅನ್‌ಲಾಕ್-2 ಆರಂಭವಾಗಲಿದೆ. ಆದರೆ, ಒಂದೆಡೆ ಲಾಕ್‌ಡೌನ್ ಸಡಿಲವಾಗುತ್ತಿದ್ದಂತೆ ರಾಜ್ಯಾದ್ಯಂತ ಸೋಂಕಿತರ ಸಂಖ್ಯೆಯೂ ಅಧಿಕವಾಗುತ್ತಿದೆ. ಕಳೆದ ವಾರದವರೆಗೆ 200ರ ಸರಾಸರಿಯಲ್ಲಿದ್ದ ಸೋಂಕಿತರ ಸಂಖ್ಯೆ ಇದೀಗ ಸಾವಿರದ ಗಡಿ ದಾಟಿದೆ.

https://twitter.com/DHFWKA/status/1277964169778589697?s=20

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights