ಹಿರಿಯ ನಟ ಹುಲಿವಾನ್ ಗಂಗಾಧರಯ್ಯ ಕೊರೊನಾ ಸೋಂಕಿನಿಂದ ಮೃತ..!
ಶುಕ್ರವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸ್ಯಾಂಡಲ್ ವುಡ್ ಹಿರಿಯ ನಟ ಹುಲಿವಾನ್ ಗಂಗಾಧರಯ್ಯ ಅವರು ಕೊರೋನಾ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ.
ಹುಲಿವಾನ್ ಗಂಗಾಧರಯ್ಯ ಅವರನ್ನು (70) ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ತೀವ್ರ ಉಸಿರಾಟದ ಸಮಸ್ಯೆ ಇದ್ದಿದ್ದರಿಂದ ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದ್ದಾರೆ.
ರಂಗಭೂಮಿ ಹಿನ್ನೆಲೆಯಿಂದ ಬಂದಿದ್ದ ಗಂಗಾಧರಯ್ಯ ಕುರಿಗಳು ಸರ್ ಕುರಿಗಳು, ನೀರ್ ದೋಸೆ, ಅಪ್ಪು, ಕ್ವಾಟ್ಲೆ ಸತೀಶ, ಕರ್ವ, ಶಬ್ದವೇಧಿ ಸೇರಿ ಅನೇಕ ಸಿನಿಮಾಗಳಲ್ಲಿ ಪೋಷಕ ಪಾತ್ರ ನಿರ್ವಹಿಸಿದ್ದು, ಸುಮಾರು 118 ಸಿನಿಮಾ, 1500 ನಾಟಕಗಳಲ್ಲಿ ಪಾತ್ರ ನಿರ್ವಹಿಸಿದ್ದಾರೆ.
ಪ್ರಸ್ತುತ ಜನಪ್ರಿಯ ಟಿವಿ ಧಾರಾವಾಹಿ “ಪ್ರೇಮಲೋಕ: ದಲ್ಲಿ ಅಭಿನಯಿಸುತ್ತಿದ್ದ ಗಂಗಾಧರಯ್ಯನವರಿಗೆ ಶೂಟಿಂಗ್ ನಲ್ಲಿದ್ದಾಗಲೇ ಜ್ವರ ಕಾಣಿಸಿಕೊಂಡಿತ್ತು ಎನ್ನಲಾಗಿದೆ.