ರಾಜ್ಯದಲ್ಲಿ ವ್ಯವಸ್ಥಿತ ಲಾಕ್‌ಡೌನ್‌ ಆಗಲೇಬೇಕು: ಸಿದ್ದರಾಮಯ್ಯ!

ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಇಂದಿನ ಸಂದರ್ಭದಲ್ಲಿ ಲಾಕ್‌ಡೌನ್‌ ಆಗಲೇ ಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಪೂರ್ವತಯಾರಿಯಿಲ್ಲದೆ ಹೇರಲಾದ ಲಾಕ್‌ಡೌನ್‌ನಿಂದಾಗಿ ಜನರು ಬೀದಿಪಾಲಾಗಿ ಸಂಕಷ್ಟ ಅನುಭವಿಸುವಂತಾಯಿತು. ರಾಜ್ಯದ ಆರ್ಥಿಕತೆ ಕುಸಿದು ಹೋಗಿದೆ. ಈಗ ಜನರು ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾಗೆ ಬಲಿಯಾಗುತ್ತಿದ್ದಾರೆ. ಹಾಗಾಗಿ ಇಂತಹ ಸಂದರ್ಭದಲ್ಲಿ ಲಾಕ್‌ಡೌನ್‌ ಮಾಡುವುದು ಅನಿವಾರ್ಯವಾಗಿದೆ.

ಶಾಸಕರ ಅಭಿಪ್ರಾಯ ಪಡೆದು ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಚಿವ ಸಂಪುಟ ಸಭೆ ನಡೆಸಿ, ಯಾವುದೇ ಕಾರಣಕ್ಕೂ ಮತ್ತೆ ಲಾಕ್‌ಡೌನ್ ಮಾಡುವುದಿಲ್ಲ ಎಂದು ಹೇಳಿದ್ದರು. ಅಲ್ಲದೆ, ಕೊರೊನಾ ನಿಯಂತ್ರಣಕ್ಕೆ ವಿರೋಧ ಪಕ್ಷಗಳು ಸಲಹೆಗಳನ್ನು ನೀಡಬೇಕು ಎಂದು ಅವರು ಹೇಳಿದ್ದರು.

ಈ ಹಿನ್ನೆಲೆಯಲ್ಲಿ, ಟ್ವೀಟ್‌ ಮಾಡುವ ಮೂಲಕ ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ರಾಜ್ಯದಲ್ಲಿ ಲಾಕ್‌ಡೌನ್‌ ಮಾಡಲೇಬೇಕು ಎಂದಿದ್ದಾರೆ.

ಪೂರ್ವಸಿದ್ಧತೆ ಇಲ್ಲದೆ ಪ್ರಾರಂಭದಲ್ಲಿ ಲಾಕ್‌ಡೌನ್ ಘೋಷಿಸಿದ್ದರಿಂದ ಜನರ ಆರೋಗ್ಯ ಮತ್ತು ರಾಜ್ಯದ ಆರ್ಥಿಕತೆ ಎರಡೂ ಹಾಳಾಯ್ತು. ಈಗ ಕೊರೊನಾ ಸೋಂಕು ವ್ಯಾಪಕವಾಗುತ್ತಿರುವಾಗ ಲಾಕ್‌ಡೌನ್ ಆಗಬೇಕಾಗಿದೆ ಎಂದು ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights