ಸರ್ಕಾರ ಲೂಟಿ ಮಾಡುತ್ತಿದೆ; ಹಾಸನ ಜನ ದಂಗೆ ಎದ್ದರೆ ಬಿಜೆಪಿ ಸರ್ಕಾರ ಉಳಿಯಲ್ಲ: ಹೆಚ್‌ ಡಿ ರೇವಣ್ಣ

ಪಬ್ಲಿಕ್ ಹೌಸಿಂಗ್ ಕಮಿಟಿ ಚೇರ್ಮನ್ ಭೇಟಿ ಮಾಡಲು ನಮಗೆ ಅವಕಾಶ ನೀಡುತ್ತಿಲ್ಲ. ಹಾಸನ ಜಿಲ್ಲೆಯ ಜನರು ದಂಗೆ ಎದ್ದರೆ ಈ ಬಿಜೆಪಿ ಸರ್ಕಾರ ಉಳಿಯಲ್ಲ. ಹಾಸನ ಜಿಲ್ಲೆಯ ಜನರ ಶಾಪ ಸರ್ಕಾರಕ್ಕೆ ಒಳ್ಳೆಯದಾಗಲ್ಲ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ  ಆಕ್ರೋಶ ಹೊರಹಾಕಿದ್ದಾರೆ.

ಇಂಜಿನಿಯರ್ ಆಗಿರುವ ಯಡಿಯೂರಪ್ಪ ಅವರ ಅಳಿಯನನ್ನು ಹುಬ್ಬಳಿಯಲ್ಲೇ ಕಾರ್ಯನಿರ್ವಹಿಸುವಂತೆ ಮುಂದುವರೆಸಿದ್ದೆ. ಯಡಿಯೂರಪ್ಪರ ಅಳಿಯನಿಗೆ ಬಡ್ತಿಯನ್ನೂ ಕೊಡಿಸಿದ್ದೆ. ಈಗ ಸಿಎಂ ಯಡಿಯೂರಪ್ಪ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನಾನು ಯಡಿಯೂರಪ್ಪ ಮತ್ತು ಈಶ್ವರಪ್ಪ ಹೇಳಿದ ಎಲ್ಲಾ ಕೆಲಸಗಳನ್ನು ಮಾಡಿಕೊಟ್ಟಿದ್ದೇನೆ. ಯಡಿಯೂರಪ್ಪ ಏನ್ ಶಾಶ್ವತವಾಗಿ ಅಧಿಕಾರದಲ್ಲಿ ಇರುತ್ತಾರಾ. ಬಿಜೆಪಿ ಲೂಟಿಕೋರರ ಸರ್ಕಾರವಾಗಿದೆ. ‌ ಕೊರೋನಾ ಹೆಸರಲ್ಲಿ ಸರ್ಕಾರ ಲೂಟಿ ಮಾಡುತ್ತಿದೆ ಎಂದು  ಆರೋಪಿಸಿದ್ದಾರೆ.

ಮೊಸಳೆ ಹೊಸಳ್ಳಿ ಇಂಜಿನಿಯರಿಂಗ್ ಕಾಲೇಜು ಹಾಸನಕ್ಕೆ ಸ್ಥಳಾಂತರಿಸಲು ಸರ್ಕಾರ ಆದೇಶ ಮಾಡಿದೆ. ಕಾಲೇಜು ಮುಚ್ಚಲ್ಲಾ ಎಂದು, ವಿಧಾನಸಭೆಯಲ್ಲಿ ಸಿಎಂ ಉತ್ತರ ಕೊಟ್ಟಿದ್ದಾರೆ. ಅದರಂತೆ ನಡೆಯಬೇಕು. ಇಲ್ಲದಿದ್ದರೆ ಸಿಎಂ ಮನೆ ಮುಂದೆ ಧರಣಿ ಕೂರುತ್ತೇವೆ. ಸಿಎಂ ವಿರುದ್ದ ಪ್ರಿವಿಲೈಜ್ ಕಮಿಟಿಗೆ ದೂರು ಸಲ್ಲಿಸುತ್ತೇನೆ. ಎಕ್ಸಿಕ್ಯೂಟಿವ್ ಇಂಜಿನಿಯರ್ ಒಬ್ಬರ ವರ್ಗಾವಣೆಗೆ 50 ಲಕ್ಷ ಪಡೆದಿದ್ದಾರೆ. ಪ್ರಾಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳಿಗೆ ಈ‌ ಸರ್ಕಾರದಲ್ಲಿ ಸ್ಥಾನ ಇಲ್ಲಾ ಎಂದು ದೂರಿದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights