ಮೋದಿ ಹೆಸರನ್ನಷ್ಟೇ ಬಳಸಿ ಚುನಾವಣೆ ಗೆಲ್ಲಲು ಆಗುವುದಿಲ್ಲ: ಉತ್ತರಖಂಡ್ ಬಿಜೆಪಿ ರಾಜ್ಯಾಧ್ಯಕ್ಷ
2022ರಲ್ಲಿ ನಡೆಯಲಿರುವ ಉತ್ತರಖಂಡ್ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಗೆಲ್ಲವು ಪ್ರಧಾನಿ ನರೇಂದ್ರ ಮೋದಿಯವರ ಹೆಸರು ಸಾಕಾಗುವುದಿಲ್ಲ ಎಂದು ಉತ್ತರಖಂಡ್ ಬಿಜೆಪಿ ರಾಜ್ಯಾಧ್ಯಕ್ಷ ಬನ್ಸಿಧರ್ ಭಗತ್ ಹೇಳಿದ್ದಾರೆ.
ಪಕ್ಷಕ್ಕೆ ಜನರು ಮತ ಚಲಾಯಿಸಬೇಕಾದರೆ, ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಶಾಸಕರು ಗೆಲುವು ಸಾಧಿಸಬೇಕಾದರೆ, ಜನರೊಂದಿಗೆ, ಅವರಿಗಾಗಿ ಕೆಲಸ ಮಾಡಬೇಕು ಎಂದು ಬಿಜೆಪಿ ಶಾಸಕರಿಗೆ ತಿಳಿಸಿದ್ದಾರೆ.
2017ರ ಉತ್ತರಾಖಂಡ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 70 ಸ್ಥಾನಗಳ ಪೈಕಿ 57 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಏರಿತ್ತು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅಧಿಕಾರಕ್ಕೇರಿದ್ದ ಮಾಜಿ ಸಿಎಂ ಹರೀಶ್ ರಾವತ್ ಅವರು ಹರಿದ್ವಾರ ಗ್ರಾಮೀಣ ಮತ್ತು ಕಿಚ್ಚ ವಿಧಾನಸಭಾ ಕ್ಷೇತ್ರ ಎರಡೂ ಕ್ಷೇತ್ರಗಳಲ್ಲೂ ಸೋತಿದ್ದು ಕಾಂಗ್ರೆಸ್ಗೆ ದೊಡ್ಡ ಮುಜುಗರವಾಗಿತ್ತು. ಕೇವಲ 11 ಸ್ಥಾನಗಳನ್ನು ಗೆಲ್ಲುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿತ್ತು.
ಇದನ್ನೂ ಓದಿ: ಜಮ್ಮುಕಾಶ್ಮೀರಕ್ಕೆ ಆಡಳಿತ ನಿಯಮ ಜಾರಿಗೊಳಿಸಿದ ಕೇಂದ್ರ: ಮುಖ್ಯಮಂತ್ರಿಗಿಲ್ಲ ಹೆಚ್ಚಿನ ಅಧಿಕಾರ