ನಟಿ ಸಂಯುಕ್ತಾ ಹೆಗ್ಡೆ ಜೊತೆ ಕಿರಿಕ್: ಕವಿತಾ ರೆಡ್ಡಿ ಬಂಧನ-ಬಿಡುಗಡೆ
ನಟಿ ಸಂಯುಕ್ತಾ ಹೆಗ್ಡೆ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನ ಆಗರ ಉದ್ಯಾನವನದಲ್ಲಿ ವ್ಯಾಯಾಮ ಮಾಡುತ್ತಿದ್ದ ಸಂದರ್ಭದಲ್ಲಿ ಅವರ ಮೇಲೆ ಗಲಾಟೆ ಮಾಡಿದ್ದ ಕಾಂಗ್ರೆಸ್ ಸದಸ್ಯೆ ಕವಿತಾ ರೆಡ್ಡಿ ಅವರನ್ನು ಬಂಧಿಸಿದ ಪೊಲೀಸರು ನಂತರ ಠಾಣಾ ಜಾಮೀನು ಮೇಲೆ ಬಿಡುಗಡೆ ಮಾಡಿದ್ದಾರೆ.
ಘಟನೆ ಕಳೆದವಾರ ನಡೆದಿದ್ದು ಘಟನೆಯ ವಿಡಿಯೋ ದೃಶ್ಯಾವಳಿಯನ್ನು ಸಂಯುಕ್ತ ಹೆಗ್ಡೆ ತಮ್ಮ ಇನ್ಸ್ಟಾಗ್ರಾಮ್ ಮೂಲಕ ಲೈವ್ ನಲ್ಲಿ ಹಂಚಿಕೊಂಡಿದ್ದರು. ಕವಿತಾ ರೆಡ್ಡಿ, ಸಾರ್ವಜನಿಕವಾಗಿ ಬಟ್ಟೆ ಬಿಚ್ಚಿ ಅಸಭ್ಯವಾಗಿ ನಡೆದುಕೊಂಡಿದ್ದನ್ನು ಪ್ರಶ್ನಿಸಿದ್ದೇನೆ ಹಾಗೂ ಪೋಲಿಸರಿಗೆ ದೂರು ನೀಡಿದ್ದೇನೆ ಎಂದು ಹೇಳಿದ್ದರು.
ಆದರೆ ನಂತರ ಸಂಯುಕ್ತಾ ಹೆಗಡೆ ಬಳಿ ನಡೆದಿರುವ ಘಟನೆಗೆ ಕ್ಷಮೆ ಕೇಳಿದ್ದ ಕವಿತಾ ರೆಡ್ಡಿ, “ನಾನು ಮೊದಲಿನಿಂದಲೂ ನೈತಿಕ ಪೊಲೀಸ್ ಗಿರಿಯನ್ನು ವಿರೋಧಿಸುತ್ತಲೇ ಬಂದಿದ್ದೇನೆ. ಅದರ ಭಾಗವಾಗಿಯೆ ನನ್ನ ಕ್ರಿಯೆಗಳು ರೂಪುಗೊಂಡಿದ್ದವು. ವಾಗ್ವಾದ ನನ್ನ ಉದ್ವೇಗಗೊಂಡ ವರ್ತನೆಯಿಂದ ಕೊನೆಯಾಯಿತು. ಇದು ನನ್ನ ಸಮಸ್ಯೆ. ಒಬ್ಬ ನಾಗರೀಕ ಪ್ರಜೆಯಾಗಿ ಮತ್ತು ಪ್ರಗತಿಪರ ಮಹಿಳೆಯಾಗಿ, ಸಂಯಕ್ತ ಹೆಗ್ಡೆ ಮತ್ತು ಅವರ ಗೆಳತಿಯರಲ್ಲಿ ನಾನು ಪ್ರಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ” ಎಂದು ಟ್ವಿಟ್ಟರ್ ವೀಡಿಯೋದಲ್ಲಿ ಹೇಳಿದ್ದರು.
I have always opposed Moral Policing. I realize that my actions were construed as such. An argument ended up in me reacting aggressively as well, it was a mistake. As a responsible citizen n progressive woman, I own up to n sincerely apologise to @SamyukthaHegde n her Friends! pic.twitter.com/pM9UJkWESC
— Kavitha Reddy (KR) Jai Bhim! (@KavithaReddy16) September 6, 2020
‘ಗಲಾಟೆ ಸಂಬಂಧ ಸಂಯುಕ್ತ ಅವರು ದೂರು ನೀಡಿದ್ದರು. ಅದರನ್ವಯ ಎಫ್ಐಆರ್ ದಾಖಲಾಗಿತ್ತು. ಇದೀಗ ಕವಿತಾ ರೆಡ್ಡಿ ಅವರನ್ನು ಬಂಧಿಸಲಾಗಿದೆ.’ ಎಂದು ಪೊಲೀಸರು ಹೇಳಿದ್ದಾಗಿ ಪ್ರಜಾವಾಣಿ ವರದಿ ಮಾಡಿದೆ.
“ಶುಕ್ರವಾರ ಸಂಜೆ 5 ಗಂಟೆಯಲ್ಲಿ ಸ್ನೇಹಿತರ ಜತೆ ವ್ಯಾಯಾಮ ಮಾಡುತ್ತಿದ್ದರು. ಅಗರ ಕೆರೆ ಸಮಿತಿ ಸದಸ್ಯೆ ಕವಿತಾ ರೆಡ್ಡಿ, ಅನಿಲ್ ರೆಡ್ಡಿ ಹಾಗೂ ಇತರರು, ’ಸಾರ್ವಜನಿಕವಾಗಿ ತುಂಡು ಬಟ್ಟೆ ಧರಿಸಿ ಅಸಭ್ಯವಾಗಿ ವರ್ತಿಸುತ್ತಿದ್ದೀರಿ’ ಎಂದು ಅವಾಚ್ಯವಾಗಿ ನಿಂದಿಸಿ, ಸಂಯುಕ್ತ ಮೇಲೆ ಹಲ್ಲೆಗೆ ಮುಂದಾಗಿದ್ದರು. ಈ ಸಂಗತಿ ಸಂಯುಕ್ತ ಅವರ ದೂರಿನಲ್ಲಿದೆ. ತಲೆಮರೆಸಿಕೊಂಡಿರುವ ಅನಿಲ್ ರೆಡ್ಡಿ ಮತ್ತು ಇತರರಿಗಾಗಿ ಹುಡುಕಾಟ ನಡೆದಿದೆ” ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ: ನ್ಯಾಷನಲ್ ಲಾ ಸ್ಕೂಲ್ನಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಶೇ.25 ಮೀಸಲಾತಿ: ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ