ಎಪಿಎಂಸಿ ತಿದ್ದುಪಡಿ ವಿಧೇಯಕ ಮಂಡನೆ ವಿರೋಧಿಸಿ ನಾಳೆ ಕಬ್ಬು ಬೆಳೆಗಾರರಿಂದ ಕರ್ನಾಟಕ ಬಂದ್!

ರೈತರ ಸಾಕಷ್ಟು ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ಎಪಿಎಂಸಿ ತಿದ್ದುಪಡಿ ವಿಧೇಯಕ ಮಂಡನೆ ನಿನ್ನೆ ಮಾಡಲಾಗಿದೆ. ಹೀಗಾಗಿ ಸರ್ಕಾರ ನಮ್ಮ ಕೂಗಿಗೆ ಸ್ಪಂದಿಸಿಲ್ಲ ಎಂದು ರೈತರು ಆಕ್ರೋಶಗೊಂಡಿದ್ದಾರೆ.  ಸೋಮವಾರ ತಾವು ಕರ್ನಾಟಕ ಬಂದ್ ಮಾಡೇ ಮಾಡ್ತೀವಿ ಎಂದು ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಇದರೊಂದಿಗೆ ನಾಳೆ ಬೀದಿಗಿಳಿದು ಅನ್ನದಾತರು ಪ್ರತಿಭಟನೆ ನಡೆಸುತ್ತಿದ್ದಾರೆ. ನಾಳೆ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ 11 ಗಂಟೆಯಿಂದ 1 ಗಂಟೆಯವರೆಗೆ ಎರಡು ಗಂಟೆಗಳ ಕಾಲ ಪ್ರತಿಭಟನೆ ನಡೆಸುವುದಾಗಿ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ಇನ್ನೂ ನಾಳೆಗೇ ಪ್ರತಿಭಟನೆ ಮಾಡೇ ಮಾಡ್ತೀವಿ ಅಂತ ರಾಜ್ಯ ಕಬ್ಬು ಬೆಳಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಕರೆ ಕೊಟ್ಟಿದ್ದಾರೆ. 34 ಸಂಘಟನೆಗಳು ನಿನ್ನೆ ಸೇರಿ ನಾಳೆ ಕರ್ನಾಟಕ ಬಂದ್ ಮಾಡಲು ನಿರ್ಧಾರಿಸಿದ್ದೇವೆ. ಇದಕ್ಕೆ ಒಪ್ಪಿಕೊಂಡು ಕರೆಕೊಟ್ಟಿದ್ದೇವೆ. ಇದರಂತೆ ನಾಳೆ ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟನೆ ಆಚರಿಸುತ್ತೇವೆ ಎಂದು ಶಾಂತಕುಮಾರ್ ಹೇಳಿದ್ದಾರೆ.

ಶುಕ್ರವಾರದಿಂದಲೇ ಉಗ್ರವಾದ ಚಳಿವಳಿ ಮಾಡಲಾಗುತ್ತದೆ. ಸೋಮವಾರ ಕರ್ನಾಟಕ ಸ್ತಬ್ಧವಾಗುವುದು ಖಂಡಿತ ಎಂದು ರೈತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ. ಕನ್ನಡ ನಾಡಿನ ಅನ್ನ ತಿಂದವರೆಲ್ಲರೂ ಸ್ವಯಂ ಪ್ರೇರಿತವಾಗಿ ಹೋರಾಟದಲ್ಲಿ ಭಾಗವಹಿಸಬೇಕು ಎಂದು ಕರೆ ಕೊಟ್ಟಿದ್ದಾರೆ.

ರಾಜ್ಯ ಸರ್ಕಾರ ರೈತ ವಿರುದ್ಧವಾದ ನೀತಿ ಜಾರಿಗೆ ತರಲು ಹೊರಟಿದೆ. ಎಂಎನ್ ಸಿ ಕಂಪನಿಗಳು ಎಪಿಎಂಸಿಯಲ್ಲಿ ಭಾಗಿಯಾಗುವಂತಿಲ್ಲ. ಇದರಿಂದ ಕಾರ್ಪೋರೇಟ್ ಕಂಪನಿಗಳಿಗೆ ಕೃಷಿ ಮಾರುಕಟ್ಟೆ ಕೊಟ್ಟಂತಾಗಿದೆ. ಇನ್ನು ಭೂಮಿ ಕೊಡುವುದು ಮಾತ್ರ ಬಾಕಿ ಉಳಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಕಿಡಿ ಕಾರಿದ್ದಾರೆ.

ಇದರಿಂದಾಗಿ ಶುಕ್ರವಾರದಿಂದಲೇ ಉಗ್ರ ಹೋರಾಟ ಮಾಡುವುದಾಗಿ ರೈತ ಮುಖಂಡರು ಕರೆ ಕೊಟ್ಟಿದ್ದಾರೆ. ಇನ್ನೂ ಇದೇ ಸೋಮವಾರ ಕರ್ನಾಟಕ ಬಂದ್ ಮಾಡುವುದು ಖಚಿತ ಎಂದು ಕೋಡಿಹಳ್ಳಿ ಚಂದ್ರಶೇಖರ್ ತೀರ್ಮಾನಿಸಿದ್ದೇವೆ ಎಂದು ಹೇಳಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights