ಜೆಡಿಎಸ್ ಬಿಜೆಪಿಯೊಂದಿಗೆ ಒಳಒಪ್ಪಂದ ಮಾಡಿಕೊಳ್ಳುತ್ತದೆ; ಜನರು ಮರುಳಾಗಬೇಡಿ: ಸಿದ್ದರಾಮಯ್ಯ
ಜನರು ಹೆಚ್.ಡಿ. ಕುಮಾರಸ್ವಾಮಿ ಕಣ್ಣೀರಿಗೆ ಮರುಳಾಗಬೇಡಿ. ಬಿಜೆಪಿಯೊಂದಿಗೆ ಜೆಡಿಎಸ್ ಒಳ ಒಪ್ಪಂದ ಮಾಡಿಕೊಳ್ಳುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೂತುಕೊಂಡು ಅಧಿಕಾರಕ್ಕೆ ಬರುವವರ ಪಕ್ಷ. ಜೆಡಿಎಸ್ ಒಂದು ರಾಜಕೀಯ ಪಕ್ಷವಲ್ಲ, ಅದಕ್ಕೆ ಅಧಿಕಾರಕ್ಕೆ ಬರುವ ಶಕ್ತಿ ಇಲ್ಲ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಕುಮಾರಸ್ವಾಮಿ ಸಿರಾಗೆ ಬಂದು ಅಳುತ್ತಿದ್ದರಂತೆ. ಅವರು ಯಾಕೆ ಕಣ್ಣೀರು ಹಾಕುತ್ತಾರೆ ಎನ್ನುವುದು ಗೊತ್ತಾಗಲಿಲ್ಲ. ಜನಸೇವೆ ಮಾಡುವವರು ಜನರ ಜತೆ ಮತಯಾಚನೆ ಮಾಡಬೇಕೇ ಹೊರತು ಕಣ್ಣೀರು ಯಾಕೆ ಹಾಕಬೇಕು ಎಂದು ಪ್ರಶ್ನಿಸಿದ್ದಾರೆ.
ದೇವೇಗೌಡರ ಕಾಲದಿಂದಲೂ ಇದೇ ಡ್ರಾಮಾ ಮಾಡಲಾಗುತ್ತಿದೆ. ಜನ ಅವರ ಕಣ್ಣೀರಿಗೆ ಮರುಳಾಗಬಾರದು. ಅವರು ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಳ್ಳುತ್ತಾರೆ. ಕಾರ್ಯಕರ್ತರು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ರಾಮ-ಹಿಂದೂತ್ವದಿಂದ ಏನೂ ನೆಟ್ಟಗಾಗಲ್ಲ; ನಾವು ಅಕ್ಕ-ತಂಗಿಯರನ್ನು ಕಳೆದುಕೊಳ್ಳುತ್ತಿದ್ದೇವೆ: ವೈಎಸ್ವಿ ದತ್ತ