ಕಲ್ಲಿದ್ದಲು ಹಗರಣ: ಬಿಜೆಪಿ ಮಾಜಿ ಸಚಿವ ದಿಲೀಪ್‌ ರೇ ಅಪರಾಧಿ ಎಂದು ತೀರ್ಪಿತ್ತ ನ್ಯಾಯಾಲಯ!

ಕಲ್ಲಿದ್ದಲು ಹಗರಣದಲ್ಲಿ ಕೇಂದ್ರ ಸರ್ಕಾರ ಮಾಜಿ ಸಚಿವ ದಲೀಪ್‌ ರೇ ಅವರು ಅಪರಾಧಿ ಎಂದು ದೆಹಲಿಯ ವಿಶೇ‍ಷ ನ್ಯಾಯಾಲಯ ಘೋಷಿಸಿದೆ.

ಅಟಲ್‌ ಬಿಹಾರಿ ವಾಜಪೇಯಿ ಸರ್ಕಾರದ ಕೇಂದ್ರದ ರಾಜ್ಯ ಕಲ್ಲಿದ್ದಲು ಸಚಿವರಾಗಿದ್ದ ಬಿಜೆಪಿ ನಾಯಕ ದಿಲೀಪ್ ರೇ ಅವರು 1999ರಲ್ಲಿ ಜಾರ್ಖಂಡ್ ಕಲ್ಲಿದ್ದಲು ಬ್ಲಾಕ್‌ಗಳ ಅಕ್ರಮ ಹಂಚಿಕೆ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು. ಇಂದು ಪ್ರಕರಣದ ವಿಚಾರಣೆ ನಡೆಸುತ್ತಿದ್ದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಭರತ್ ಪರಾಶರ್ ಅವರು ಇಂದು ತೀರ್ಪು ನೀಡಿದ್ದು, ದಿಲೀಪ್‌ ರೇ ಅಪರಾಧಿ ಎಂದು ಘೋಷಿಸಿದೆ.

ಅಲ್ಲದೆ, ಅವರ ಆಡಳಿತಾವಧಿಯಲ್ಲಿ ಕಲ್ಲಿದ್ದಲು ಸಚಿವಾಲಯದ ಇಬ್ಬರು ಹಿರಿಯ ಅಧಿಕಾರಿಗಳಾದ ಪ್ರದೀಪ್ ಕುಮಾರ್ ಬ್ಯಾನರ್ಜಿ ಮತ್ತು ನಿತ್ಯಾನಂದ್ ಗೌತಮ್, ಕ್ಯಾಸ್ಟ್ರಾನ್ ಟೆಕ್ನಾಲಜೀಸ್ ಲಿಮಿಟೆಡ್ (ಸಿಟಿಎಲ್), ಅದರ ನಿರ್ದೇಶಕ ಮಹೇಂದ್ರ ಕುಮಾರ್ ಅಗರ್ವಾಲ್ ಮತ್ತು ಕ್ಯಾಸ್ಟ್ರಾನ್ ಮೈನಿಂಗ್ ಲಿಮಿಟೆಡ್ (ಸಿಎಮ್‌ಎಲ್) ಗೆ ಸಹ ನ್ಯಾಯಾಲಯ ಅಪರಾಧಿ ಎಂದು ಘೋಷಿಸಿದೆ.

ಅಕ್ಟೋಬರ್ 14 ರಂದು ನ್ಯಾಯಾಲಯವು ಶಿಕ್ಷೆಯ ಪ್ರಮಾಣವನ್ನು ಘೋಷಿಸಲಿದೆ.


ಇದನ್ನೂ ಓದಿ: ಡಿಕೆಶಿ ಆಸ್ತಿ ಮೌಲ್ಯ 5 ವರ್ಷದಲ್ಲಿ 128 ಕೋಟಿ ಹೆಚ್ಚಳ; ಸಮರ್ಪಕ ದಾಖಲೆಗಳಿಲ್ಲ: ಸಿಬಿಐ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights