ಉತ್ತರಪ್ರದೇಶ : ದಲಿತ ವೃದ್ಧನಿಗೆ ಥಳಿಸಿ ಬಲವಂತವಾಗಿ ಮೂತ್ರ ಕುಡಿಸಿದ ಪಾಪಿಗಳು..

ಉತ್ತರ ಪ್ರದೇಶದ ಲಲಿತಪುರದ ರೋಡಾ ಗ್ರಾಮದಲ್ಲಿ 65 ವರ್ಷದ ದಲಿತ ವೃದ್ಧನ ಮೇಲೆ ಹಲ್ಲೆ ನಡೆಸಿ ಮೂತ್ರ ವಿಸರ್ಜಿಸಲು ಒತ್ತಾಯಿಸಿ ಅದನ್ನೇ ಕುಡಿಸಲಾಗಿದೆ.

ಆರೋಪಿ ಸೋನು ಯಾದವ್ ಕೆಲವು ದಿನಗಳ ಹಿಂದೆ ಕೊಡಲಿಯಿಂದ ವೃದ್ಧನ ಮಗನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ತಂದೆ ಮತ್ತು ಮಗ ಪೊಲೀಸರನ್ನು ಸಂಪರ್ಕಿಸಿದ ನಂತರ ಯಾದವ್ ಅವರು ಈ ವಿಷಯವನ್ನು ಇತ್ಯರ್ಥಪಡಿಸುವಂತೆ ಮತ್ತು ಅವರ ದೂರನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

ಮಂಗಳವಾರ ಯಾದವ್ ವೃದ್ಧನಿಗೆ ಮೂತ್ರ ಕುಡಿಯುವಂತೆ ಒತ್ತಾಯಿಸಿದ್ದಾನೆ. ಈ ಬಗ್ಗೆ ಅಳಲು ತೋಡಿಕೊಂಡ ವೃದ್ಧ “ನಾನು ನಿರಾಕರಿಸಿದಾಗ ಅವನು ಕೋಲಿನಿಂದ ನನ್ನ ಮೇಲೆ ಹಲ್ಲೆ ಮಾಡಿದ. ಅವನು ಕೆಲವು ದಿನಗಳ ಹಿಂದೆ ನನ್ನ ಮಗನನ್ನು ಕೊಡಲಿಯಿಂದ ಹಲ್ಲೆ ಮಾಡಿದ್ದನು. ನಾವು ಆತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದೆವು. ಆದ್ದರಿಂದ ಅವರು ನಮ್ಮನ್ನು ರಾಜಿ ಮಾಡಿಕೊಳ್ಳಲು ಒತ್ತಾಯಿಸುತ್ತಿದ್ದನು ”ಎಂದು ವೃದ್ಧನ ಮಗ ಅಮರ್ ತಿಳಿಸಿದರು.

ಠಾಣೆಯಲ್ಲಿ ಯಾದವ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು ಯಾದವ್‌ನನ್ನು ಬಂಧಿಸಲು ಹುಡುಕಾಟ ನಡೆಯುತ್ತಿದೆ ಎಂದು ಲಲಿತ್‌ಪುರ ಎಸ್‌ಪಿ ಮಿರ್ಜಾ ಮಂಜಾರ್ ಬೇಗ್ ತಿಳಿಸಿದ್ದಾರೆ. “ಕೆಲವೇ ಪ್ರಭಾವಿ ಜನರು ರೋಡಾ ಗ್ರಾಮದಲ್ಲಿ ಇಬ್ಬರು ಗ್ರಾಮಸ್ಥರನ್ನು ಥಳಿಸಿದರು. ಮಾಹಿತಿ ಬಂದ ಕೂಡಲೇ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಮುಖ್ಯ ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಪ್ರಕರಣದಲ್ಲಿ ಭಾಗಿಯಾಗಿರುವ ಇತರರಿಗಾಗಿ ಶೋಧ ನಡೆಯುತ್ತಿದೆ. ನಾವು ಯಾವುದೇ ರೀತಿಯ ಬೆದರಿಸುವಿಕೆಯನ್ನು ಸಹಿಸುವುದಿಲ್ಲ ” ಎಂದಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights