ರೈತರನ್ನು ಭಯೋತ್ಪಾದಕರು ಎಂದಿದ್ದ ನಟಿ ಕಂಗನಾ: ತುಮಕೂರು ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲು

ನೂತನ ಕೃಷಿ ಕಾನೂನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಭಯೋತ್ಪಾದಕರು ಎಂದು ಕರೆದಿರುವ ನಟಿ ಕಂಗನಾ ರಣಾವತ್‌ ವಿರುದ್ಧ ತುಮಕೂರು ನಗರದ ಕ್ಯಾತಸಂದ್ರ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದಾರೆ.

ರೈತ ಪ್ರತಿಭಟನಾಕಾರರನ್ನು ಭಯೋತ್ಪಾದಕರು ಎಂದು 2020ರ ಸೆಪ್ಟೆಂಬರ್ 21 ರಂದು ಟ್ವೀಟ್‌ ಮಾಡಿದ್ದ ಕಂಗನಾ ವಿರುದ್ಧ ಕ್ರಿಮಿನಲ್ ಪ್ರೊಸೀಜರ್ ಸೆಕ್ಷನ್ 156 (3) ರ ಅಡಿಯಲ್ಲಿ ಡಿಜಿಪಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ತುಮಕೂರಿನ ವಕೀಲರಾದ ವಕೀಲ ಎಲ್. ರಮೇಶ್ ನಾಯಕ್ ದೂರು ದಾಖಲಿಸಿದ್ದರು.

ದೂರು ದಾಖಲಿಸಿದ ನಂತರವೂ ಪೊಲೀಸ್ ಅಧಿಕಾರಿಗಳು ಅಥವಾ ಸರ್ಕಾರ ನಟಿ ವಿರುದ್ಧ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ವಕೀಲ ರಮೇಶ್‌ ನಾಯಕ ನ್ಯಾಯಾಲಯದ ಮೊರೆ ಹೋಗಿದ್ದರು. ದೂರಿನ ವಿಚಾರವಾಗಿ ವಿಚಾರಣೆ ನಡೆಸಿರುವ ನ್ಯಾಯಾಧೀಶ ವಿನೋದ್ ಬಾಲನಾಯಕ್ ಅವರು ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸುವಂತೆ ಸೂಚಿಸಿದ್ದರು.

ಈ ಹಿನ್ನಲೆಯಲ್ಲಿ, ತುಮಕೂರಿನ ಕ್ಯಾತ್ಸಂದ್ರ ಪೊಲೀಸರು ನಟಿ ಕಂಗನಾ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ.


ಇದನ್ನೂ ಓದಿ: ತುಮಕೂರು: ನಟಿ ಕಂಗನಾ ವಿರುದ್ಧ FIR‌ ದಾಖಲಿಸಿ, ತನಿಖೆ ನಡೆಸಲು ಕೋರ್ಟ್‌ ನಿರ್ದೇಶನ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights